Connect with us

LATEST NEWS

ತಾಯಿ ಹುಟ್ಟುಹಬ್ಬಕ್ಕೆ ವಿಶ್ ಮಾಡಲು ಮೊಬೈಲ್ ನೀಡದಕ್ಕೆ ವಿಧ್ಯಾರ್ಥಿ ಆತ್ಮಹತ್ಯೆಗೆ ಶರಣು

ಮಂಗಳೂರು ಜೂನ್ 12: ತನ್ನ ತಾಯಿಯ ಜನ್ಮದಿನಕ್ಕೆ ಶುಭಾಶಯ ತಿಳಿಸಲು ಹಾಸ್ಟೆಲ್ ವಾರ್ಡನ್ ಮೊಬೈಲ್ ನೀಡದ್ದಕ್ಕೆ ಮನನೊಂದು ವಿಧ್ಯಾರ್ಥಿಯೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಯಲ್ಲಿ ನಡೆದಿದೆ.


ಮೃತ ಬಾಲಕನನ್ನು ಬೆಂಗಳೂರು ಹೊಸಕೋಟೆ ಮೂಲದ ಪೂರ್ವಜ್ (14) ಎಂದು ಗುರುತಿಸಲಾಗಿದ್ದು, ಈತ ಕಿನ್ಯಾ ಶಾರದಾ ವಿಧ್ಯಾನಿಕೇತನದಲ್ಲಿ 9ನೇ ತರಗತಿ ಕಲಿಯುತ್ತಿದ್ದ ಎಂದು ತಿಳಿದು ಬಂದಿದೆ. ಜೂನ್ 11 ರಂದು ಆತನ ತಾಯಿ ಹುಟ್ಟುಹಬ್ಬದ ಹಿನ್ನಲೆ ತಾಯಿಗೆ ಕರೆ ಮಾಡಿ ಶುಭಾಷಯ ತಿಳಿಸಲು ಹಾಸ್ಟೆಲ್ ವಾರ್ಡನ್ ಗೆ ಮೊಬೈಲ್ ಕೇಳಿದ್ದಾನೆ. ಆದರೆ ವಾರ್ಡನ್ ಮೊಬೈಲ್ ನೀಡಲು ನಿರಾಕರಿಸಿದ್ದಾನೆ. ಅಲ್ಲದೆ ಮನೆಯವರು ಕರೆ ಮಾಡಿದ ಸಂದರ್ಭದಲ್ಲೂ ಕೂಡ ಬಾಲಕನಿಗೆ ಕರೆ ನೀಡಿಲ್ಲ ಎಂದು ಆರೋಪಿಸಲಾಗಿದೆ.
ಇದರಿಂದ ಮನನೊಂದ ಬಾಲಕ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮನೆಯವರು ಆರೋಪಿಸಿದ್ದಾರೆ.

ಬಾಲಕ ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿದ್ದು, ಅದರಲ್ಲಿ ಅಮ್ಮನಿಗೆ ಹುಟ್ಟುಹಬ್ಬದ ಶುಭಾಷಯಗಳು. ಎಲ್ಲರೂ ಖುಷಿಯಾಗಿರಿ, ಶಾಲೆಗೆ ತನಗಾಗಿ ಕಟ್ಟಿರುವ ಶುಲ್ಕವನ್ನು ವಾಪಸ್ಸು ಪಡೆದುಕೊಳ್ಳಿ. ನಿಮ್ಮಿಂದ ನಾನು ದೂರವಾಗುತ್ತಿದ್ದೇನೆ. ಯಾರೂ ಕೂಗಬೇಡಿ, ಎಂದು ಆಂಗ್ಲಭಾಷೆಯಲ್ಲಿ ಡೆತ್‌ ನೋಟಲ್ಲಿ ಬರೆದಿಡಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *