DAKSHINA KANNADA
ಸುಬ್ರಹ್ಮಣ್ಯ : ಲೂಡಾ ಬಳಸಿ ಜೂಜಾಟ ಆಡುತ್ತಿದ್ದ ಅಡ್ಡೆಗೆ ಪೊಲೀಸ್ ದಾಳಿ..!
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಹಣ ಪಣವಾಗಿಟ್ಟು ಲೂಡಾ ಉಪಯೋಗಿಸಿ ಜೂಜಾಟ ಆಟವಾಡುತ್ತಿದ್ದ ಜೂಜು ಅಡ್ಡೆಗೆ ಸುಬ್ರಹ್ಮಣ್ಯ ಪೊಲೀಸರು ರೈಡ್ ಮಾಡಿದ್ದಾರೆ.
ಸುಬ್ರಹ್ಮಣ್ಯ: ಹಣ ಪಣವಾಗಿಟ್ಟು ಲೂಡಾ ಉಪಯೋಗಿಸಿ ಜೂಜಾಟ ಆಟವಾಡುತ್ತಿದ್ದ ಜೂಜು ಅಡ್ಡೆಗೆ ಸುಬ್ರಹ್ಮಣ್ಯ ಪೊಲೀಸರು ರೈಡ್ ಮಾಡಿದ್ದಾರೆ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕೊಲ್ಲಮೊಗ್ರ ಬಸ್ಸು ನಿಲ್ದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಹಣ ಪಣವಾಗಿಟ್ಟುಕೊಂಡು ಅದೃಷ್ಟ ಆಟವಾದ ಲೂಡ ದಾಳವನ್ನು ಉಪಯೋಗಿಸಿ ಜೂಜಾಟ ಆಟ ಆಡುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿತ್ತು.
ಪೊಲೀಸ್ ದಾಳಿ ವೇಳೆ ಸ್ಥಳದಲ್ಲಿದ್ದವರು ಪರಾರಿಯಾಗಿದ್ದಾರೆ. ಈ ಸಂದರ್ಭ ಕಿರಣ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.
ಯಾವುದೇ ಪರವಾನಿಗೆ ಇಲ್ಲದೇ ಅದೃಷ್ಟದ ಆಟ ಆಡುತ್ತಿರುವುದನ್ನು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
ಉಳಿದವರು ಸ್ಥಳದಿಂದ ಓಡಿ ಹೋಗಿದ್ದು ಅವರ ವಿಳಾಸ ಕೇಳಲಾಗಿ ಕುಮಾರ್ ಗಡಿಕಲ್ಲು , ಅವಿನ್ ಗಡಿಕಲ್ಲು, ಲಕ್ಷ್ಮಣ ಕಡೋಡಿ ಎಂಬುದಾಗಿ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ದಾಳಿಯ ಸಮಯ ಅದೃಷ್ಟದ ಆಟಕ್ಕೆ ಒಟ್ಟು ರೂಪಾಯಿ 1350, ಆಟಕ್ಕೆ ಉಪಯೋಗಿಸಿದ ಲೂಡದ ದಾಳ-1, ಲೂಡದ ದಾಳ ಹಾಕುವರೇ ಉಪಯೋಗಿಸಿದ ರಟ್ಟಿನ ತುಂಡು -1 ಇವುಗಳನ್ನು ಸ್ವಾಧೀನಪಡಿಸಿಕೊಂಡು ಸುಬ್ರಹ್ಮಣ್ಯ ಠಾಣಾ ಅ.ಕ್ರ 64/2023, ಕಲಂ:87 ಕೆ ಪಿ ಆಕ್ಟ್ ನಂತೆ ಪ್ರಕರಣ ದಾಖಲಿಸಿಕೊಂಡಿರುವುದಾಗಿದೆ.
You must be logged in to post a comment Login