Connect with us

    DAKSHINA KANNADA

    ಸುಬ್ರಹ್ಮಣ್ಯ: ಪ್ರವಾಹ ನೀರಿಗೆ ಬಿದ್ದ ಜೆಸಿಬಿ ಆಪರೇಟರ್ ಶರೀಫ್ ರನ್ನು ರಕ್ಷಿಸಿದ ಸೋಮಶೇಖರ್

    ಸುಬ್ರಹ್ಮಣ್ಯ, ಆಗಸ್ಟ್ 03:  ದಕ್ಷಿಣ ಕನ್ನಡ ಸುಳ್ಯ ತಾಲ್ಲೂಕಿನ ಹರಿಹರ ಪಲ್ಲತ್ತಡ್ಕ ಎಂಬಲ್ಲಿ ಸೇತುವೆ ಮೇಲೆ ಇದ್ದ ಮರಗಳನ್ನು ಜೆಸಿಬಿಯಲ್ಲಿ ತೆರವುಗೊಳಿಸುತ್ತಿದ್ದ ಸಂದರ್ಭದಲ್ಲಿ  ನಿಯಂತ್ರಣ ತಪ್ಪಿ ನದಿಗೆ ಬಿದ್ದ ಜೆಸಿಬಿ ಆಪರೇಟರ್ ಅವರನ್ನು ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬರು ಅಪಾಯ ಲೆಕ್ಕಿಸದೇ ಪ್ರವಾಹದ  ನೀರಿಗೆ ಧುಮುಕಿ ಮಂಗಳವಾರ ರಕ್ಷಣೆ ಮಾಡಿದ್ದಾರೆ.

    ನದಿಯಲ್ಲಿ ತೇಲಿ ಬಂದು ಸೇತುವೆಗೆ ಅಪ್ಪಳಿಸಿದ್ದ ಮರದ ದಿಮ್ಮಿಗಳನ್ನು ಜೆಸಿಬಿ  ಆಪರೇಟರ್ ಶರೀಫ್ ತೆರವು ಗೊಳಿಸುವಾಗ  ಆಯ ತಪ್ಪಿ ನದಿಗೆ ಬಿದ್ದರು. ತಕ್ಷಣವೇ ನದಿಗೆ ಹಾರಿದ ಸೋಮಶೇಖರ್ ಕಟ್ಟೆಮನೆ ಅವರು ಶರೀಫ್‌ ಅವರನ್ನು  ರಕ್ಷಿಸಿದರು.

    ಕೋಮುದ್ವೇಷದಿಂದ ಹತ್ಯೆಗಳು ನಡೆದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ತನ್ನ  ಪ್ರಾಣವನ್ನೇ ಪಣಕ್ಕಿಟ್ಟು ಅನ್ಯ ಧರ್ಮದ‌ ವ್ಯಕ್ತಿಯೊಬ್ಬರನ್ನು ರಕ್ಷಣೆ ಮಾಡಿದ್ದಕ್ಕೆ ಪ್ರಶಂಸೆ ವ್ಯಕ್ತವಾಗಿದೆ. ಈ ದೃಶ್ಯವನ್ನು ಸ್ಥಳದಲ್ಲಿದ್ದವರು ವಿಡಿಯೊ ಮಾಡಿದ್ದರು. ಈ ವಿಡಿಯೊವನ್ನು ಅನೇಕರು ಸಾಮಾಜಿಕ ಜಾಲತಾಣಗಳಲ್ಲಿ  ಹಂಚಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply