Connect with us

    LATEST NEWS

    ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ವಿವಾದ ಇಂದು ಸುಬ್ರಹ್ಮಣ್ಯ ಬಂದ್

    ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ವಿವಾದ ಇಂದು ಸುಬ್ರಹ್ಮಣ್ಯ ಬಂದ್

    ಮಂಗಳೂರು ಮಾರ್ಚ್ 7: ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ದಕ್ಷಿಣಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವನ್ನು ತಮ್ಮ ಸ್ವಾಧೀನಕ್ಕೆ ನೀಡಬೇಕೆನ್ನುವ ಸಂಪುಟ ನರಸಿಂಹ ಮಠದ ಯತ್ನವನ್ನು ವಿರೋಧಿಸಿ ಇಂದು ಸುಬ್ರಹ್ಮಣ್ಯ ಬಂದ್ ಗೆ ಕರೆ ನೀಡಲಾಗಿದೆ‌.

    ಕುಕ್ಕೆಶ್ರೀ ಕ್ಷೇತ್ರ ಭಕ್ತರ ಹಿತರಕ್ಷಣಾ ವೇದಿಕೆ ಈ ಬಂದ್ ಕರೆಯನ್ನು ನೀಡಿದ್ದು, ಸುಬ್ರಹ್ಮಣ್ಯ ಕ್ಷೇತ್ರ ಪರಿಸರದ ಬಹುತೇಕ ಅಂಗಡಿಗಳು ಬಂದ್ ಆಗಿವೆ. ಈ ನಡುವೆ ಸಂಪುಟ ನರಸಿಂಹ ಮಠದ ವಿರುದ್ಧ ಬಂದ್ ಆಚರಿಸದಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ ಮಠದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದ್ದು, ಬಲತ್ಕಾರದ ಬಂದ್ ಗೆ ಅವಕಾಶ ನೀಡದಂತೆ ಪೋಲೀಸ್ ಇಲಾಖೆಗೆ ಸೂಚಿಸಿದೆ.

    ಈ ನಡುವೆ ಮಠಕ್ಕೆ ಸೇರಿದ ಅಂಗಡಿಗಳನ್ನು ಹೊರತು ಪಡಿಸಿ ಉಳಿದೆಲ್ಲಾ ಅಂಗಡಿಗಳು ಇಂದು ಮುಚ್ಚಿವೆ.

    Share Information
    Advertisement
    Click to comment

    You must be logged in to post a comment Login

    Leave a Reply