Connect with us

LATEST NEWS

ಹಿಂದೂ ಕಾರ್ಯಕರ್ತ ಸುಹಾಶ್ ಶೆಟ್ಟಿ ಕೊ**ಲೆ – ಮಂಗಳೂರಿನಾದ್ಯಂತ ಬಿಗಿ ಬಂದೋಬಸ್ತ್

ಮಂಗಳೂರು ಮೇ 01: ಬಜ್ಪೆ ಕಿನ್ನಿಪದವು ಬಳಿ ನಡೆದ ರೌ ಡಿ ಶೀಟರ್ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ ಹಿನ್ನಲೆ ಮಂಗಳೂರಿನಾದ್ಯಂತ ಪೊಲೀಸರು ಬಿಗಿ ಬಂದೋಬಸ್ತ್ ಕಲ್ಪಿಸಿದ್ದಾರೆ.


ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ತಲ್ವಾರ್​ನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ರೌಡಿಶೀಟರ್ ಸುಹಾಸ್ ಶೆಟ್ಟಿಯು ಸುರತ್ಕಲ್​ನ ಫಾಜಿಲ್ ಕೊಲೆ ಕೇಸ್​ನ​ ಪ್ರಮುಖ ಆರೋಪಿಯಾಗಿದ್ದರು. ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ 2022ರ ಜುಲೈ 28ರಂದು ಫಾಜಿಲ್​ನ ಕೊಲೆಯಾಗಿತ್ತು. ಈ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ‌ ಪ್ರಮುಖ ಆರೋಪಿಯಾಗಿದ್ದರು.
ಇನ್ನು ಸುಹಾಸ್​ ಹತ್ಯೆ ವಿಷಯ ತಿಳಿಯುತ್ತಿದ್ದಂತೆಯೇ ಮಂಗಳೂರಿನ ಎ.ಜೆ‌‌.ಆಸ್ಪತ್ರೆಗೆ ಮಂಗಳೂರು ದಕ್ಷಿಣ ಬಿಜೆಪಿ ಶಾಸಕ ವೇದವ್ಯಾಸ‌ ಕಾಮತ್ ಆಗಮಿಸಿದ್ದಾರೆ. ಇನ್ನು ಆಸ್ಪತ್ರೆ ಎದುರು ಭಾರೀ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಸೇರಿದ್ದಾರೆ. ಇದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಪತ್ರೆ ಎದುರು ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.


ಇನ್ನು ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಮಂಗಳೂರು ಹಲವೆಡೆ ನಾಕಾಬಂದಿ ಹಾಕಿದ್ದಾರೆ. ಅಲ್ಲದೇ ಸೂಕ್ಷ್ಮ ಪ್ರದೇಶದಲ್ಲಿ ರಾತ್ರಿ ಇಡೀ ಗಸ್ತು ತಿರುಗಲು ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದು, ಮಂಗಳೂರು ನಗರಕ್ಕೆ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *