LATEST NEWS
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ – ಸುರತ್ಕಲ್ ಬಜಪೆ ಹಲವು ಕಡೆಗಳಲ್ಲಿ ಎನ್ಐಎ ದಾಳಿ

ಮಂಗಳೂರು ಅಗಸ್ಟ್ 02: ಬಿಜೆಪಿ ಯುವ ಮುಖಂಡ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಬಜಪೆ ಹಾಗೂ ಸುರತ್ಕಲ್ನ 14 ಕಡೆ ಎನ್ಐಎ ದಾಳಿ ನಡೆಸಿದೆ.
ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ 10 ಕಡೆ, ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ 4 ಕಡೆ ಎನ್ಐಎ ದಾಳಿ ಮಾಡಿದೆ. ಕೊಲೆ ಆರೋಪಿಗಳು ಹಾಗೂ ಎಸ್ಡಿಪಿಐ ಮುಖಂಡರ ಮನೆಗೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ನಿಷೇಧಿತ ಸಂಘಟನೆ ಪಿಎಫ್ಐ ಕಾರ್ಯಕರ್ತರು ಶಾಮೀಲಾಗಿರುವ ಆರೋಪ ಕೇಳಿಬಂದಿದೆ. ಇದರಿಂದಾಗಿ ಈ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಇಲಾಖೆ ಎನ್ಐಎ ತನಿಖೆಗೆ ವಹಿಸಿತ್ತು.
ಮೇ 1 ರಂದು ಫಾಜಿಲ್ ಹತ್ಯೆಯ ಆರೋಪಿ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಹತ್ಯೆಗೆ ದೇಶ, ವಿದೇಶಗಳಿಂದ ಫಂಡಿಂಗ್ ಆಗಿದೆ. ರಾಜ್ಯದ ಪೊಲೀಸ್ ಇಲಾಖೆಯಿಂದ ನಿಸ್ಪಕ್ಷಪಾತವಾಗಿ ತನಿಖೆ ನಡೆಸಲು ಸಾಧ್ಯವಿಲ್ಲ. ಹೀಗಾಗಿ ಎನ್ಐಎಗೆ ಒಪ್ಪಿಸಬೇಕೆಂದು ಆಗ್ರಹಿಸಿ ಬಿಜೆಪಿ, ಸೇರಿದಂತೆ ಹಿಂದೂಪರ ಕಾರ್ಯರ್ತರು ಆಗ್ರಹಿಸಿದ್ದರು. ಸುಹಾಸ್ ಶೆಟ್ಟಿ ಹತ್ಯೆ ಕೇಸ್ನಲ್ಲಿ ಈಗಾಗಲೇ ಪೊಲೀಸರು 11 ಮಂದಿಯನ್ನು ಬಂಧಿಸಿದ್ದಾರೆ.