BELTHANGADI
ಬೆಳ್ತಂಗಡಿ – ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ
ಬೆಳ್ತಂಗಡಿ ಅಗಸ್ಟ್ 31: ಯುವಕನೊಬ್ಬ ಮನೆಯ ಬಾತ್ ರೂಂ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಎಂಬಲ್ಲಿ ನಡೆದಿದೆ.
ಮೃತ ಯುವಕನನ್ನು ಪುದುವೆಟ್ಟು ಕುಬಲ ನಿವಾಸಿ ಸ್ವರಾಜ್ (24) ಎಂದು ಗುರುತಿಸಲಾಗಿದೆ. ಅತ್ಯುತ್ತಮ ಕಬಡ್ಡಿ ಆಟಗಾರರಾಗಿದ್ದ ಇವರು ಉಜಿರೆಯ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಇಂದು ಪುದುವೆಟ್ಟುವಿನಲ್ಲಿದ್ದ ಅವರ ಹಳೆಮನೆಯ ಸ್ನಾನಗೃಹದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತರು ತಂದೆ , ತಾಯಿ ಹಾಗೂ ಸಹೋದರಿ, ಕುಟುಂಬ ವರ್ಗವನ್ನು ಅಗಲಿದ್ದಾರೆ.
You must be logged in to post a comment Login