Connect with us

    BANTWAL

    ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಶರಣಾದ ಯುವಕ

    ಬಂಟ್ವಾಳ ಮಾರ್ಚ್ 26: ನೇತ್ರಾವತಿ ನದಿಗೆ ಹಾರಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಬಂಟ್ವಾಳದ ಗೂಡಿನಬಳಿ ಎಂಬಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ.


    ಪುತ್ತೂರು ಸಮೀಪ ಕೆಮ್ಮಿಂಜೆ ನಿವಾಸಿ ವಿಘ್ನೇಶ್ ಕಾಮತ್ (32) ಆತ್ಮಹತ್ಯೆಗೆ ಶರಣಾದ ಯುವಕ. ಭಾನುವಾರ ಮಧ್ಯಾಹ್ನ ಸ್ಕೂಟರ್‌ನಲ್ಲಿ ಪಾಣೆಮಂಗಳೂರು ಗೂಡಿನಬಳಿಗೆ ಆಗಮಿಸಿದ್ದ ವಿಘ್ನೇಶ್ ಅಲ್ಲೇ ನೇತ್ರಾವತಿ ಹಳೆ ಸೇತುವೆ ಬಳಿ ಸ್ಕೂಟರ್ ನಿಲ್ಲಿಸಿ ನದಿಗೆ ಹಾರಿದ್ದಾರೆ. ಕೂಡಲೇ ಸ್ಥಳೀಯ ಈಜುಗಾರರು ನದಿಗೆ ಹಾರಿ ಆತನನ್ನು ರಕ್ಷಿಸುವ ಪ್ರಯತ್ನ ಮಾಡಿದ್ದರಾದರೂ ಸಾಧ್ಯವಾಗಲಿಲ್ಲ. ಬಳಿಕ ವಿಘ್ನೇಶ್ ಮೃತದೇಹವನ್ನು ಮೇಲಕ್ಕೆತ್ತಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ಆಗಮಿಸಿದ್ದಾರೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

    Share Information
    Advertisement
    Click to comment

    You must be logged in to post a comment Login

    Leave a Reply