Connect with us

    KARNATAKA

    ಪತಿ ಚಾಕಲೇಟ್ ತರದಿದ್ದಕ್ಕೆ ಪತ್ನಿ ಆತ್ಮಹತ್ಯೆಗೆ ಶರಣು…!!

    ಬೆಂಗಳೂರು ಎಪ್ರಿಲ್ 07: ಪತಿ ಚಾಕಲೇಟ್ ತಂದುಕೊಡಲಿಲ್ಲ ಎಂದು ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


    ಮೃತರನ್ನು ನಂದಿನಿ(30) ಎಂದು ಗುರುತಿಸಲಾಗಿದೆ. ನಂದಿನಿಗೆ 6 ವರ್ಷದ ಹಿಂದೆ ಮದುವೆಯಾಗಿದ್ದ ಮೃತ ನಂದಿನಿ‌ಗೆ ಇಬ್ಬರು ಮಕ್ಕಳಿದ್ದಾರೆ. ನಂದಿನಿ ಪತಿ ಸಲೂಲ್​ನಲ್ಲಿ ಕೆಲಸ ಮಾಡಿಕೊಂಡಿದ್ದು, ಬೆಳಗ್ಗೆ ಪತಿ ಕೆಲಸಕ್ಕೆ ಹೋಗುವಾಗ ಚಾಕೋಲೆಟ್ ತೆಗೆದುಕೊಂಡು ಬರುವಂತೆ ಹೇಳಿದ್ದಳಂತೆ. ಆದ್ರೆ, ಮಧ್ಯಾಹ್ನವಾದರೂ ಪತಿ ಚಾಕೋಲೆಟ್ ತಂದು ಕೊಟ್ಟಿಲ್ಲ. ಅಲ್ಲದೇ ಫೋನ್ ಮಾಡಿದ್ದರೂ ಪತಿ ಸ್ವೀಕರಿಸಿಲ್ವಂತೆ. ಇದರಿಂದ ಮನನೊಂದು ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ.

    ಬಳಿಕ ಪತಿ ಮನೆಗೆ ಬಂದು ನೋಡಿದಾಗ ನಂದಿನಿ ನೇಣು ಹಾಕಿಕೊಂಡಿದ್ದಳು. ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದ್ರೆ, ಅಷ್ಟರಲ್ಲಾಗಲೇ ನಂದಿನಿ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಚಾಕೋಲೆಟ್​ ತಂದು ಕೊಡದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗುತ್ತಿದೆ. ಆದ್ರೆ, ಈ ಬಗ್ಗೆ ಪೊಲೀಸರು ಯಾವುದೇ ಖಚಿತ ಕಾರಣ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಪೊಲೀಸ್ ತನಿಖೆ ಬಳಿಕ ನಂದಿನಿ ಸಾವಿನ ಬಗ್ಗೆ ಸತ್ಯಾಸತ್ಯತೆ ತಿಳಿದುಬರಲಿದೆ.

    Share Information
    Advertisement
    Click to comment

    You must be logged in to post a comment Login

    Leave a Reply