Connect with us

    LATEST NEWS

    ಅಪಘಾತದಲ್ಲಿ ಗಾಯಗೊಂಡಿದ್ದ ಪತಿ ಚಿಕಿತ್ಸೆಗೆ ಆರ್ಥಿಕ ಸಂಕಷ್ಟ – ಮನನೊಂದ ಪತ್ನಿ ಆತ್ಮಹತ್ಯೆಗೆ ಶರಣು

    ಉಡುಪಿ ಎಪ್ರಿಲ್ 14: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಪತಿಯ ಚಿಕಿತ್ಸೆಗೆ ಹಣ ಇಲ್ಲದ ಕಾರಣ ಮನನೊಂದು ಪತ್ನಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಅಜೆಕಾರು ಸಮೀಪದ ಅಂಡಾರು ಬಾಳೆಹಿತ್ಲು ಎಂಬಲ್ಲಿ ನಡೆದಿದೆ.


    ಹಿರ್ಗಾನ ದಲ್ಲಿ ಎಪ್ರಿಲ್ 9ರಂದು ನಡೆದ ರಸ್ತೆ ಅಪಘಾತದಲ್ಲಿ ಸತೀಶ್ ಎನ್. ರಾವ್ ಗಂಭೀರವಾಗಿ ಗಾಯಗೊಂಡಿದ್ದರು, ವೃತ್ತಿಯಲ್ಲಿ ಅವರು ರಿಕ್ಷಾ ಚಾಲಕರಾಗಿರುವ ಅವರು ಸದ್ಯ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಹೆಚ್ಚಿನ ಚಿಕಿತ್ಸೆಗೆ ಹಣದ ಅವಶ್ಯಕತೆ ಇದ್ದು, ಇದರಿಂದ ಗಾಯಾಳುವಿನ ಪತ್ನಿ ವನಿತಾ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು. ಶಸ್ತ್ರ ಚಿಕತ್ಸೆಗೆ ಅಗತ್ಯವಾದ ಹಣವಿಲ್ಲ ಎಂಬ ಕೊರಗಿನಲ್ಲಿದ್ದರು ಎಂದು ಹೇಳಲಾಗಿದೆ. ಈ ಹಿನ್ನಲೆ ವನಿತಾ ತೋಟದ ಬಾವಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಬಗ್ಗೆ ಅಜೆಕಾರು ಠಾಣೆಯಲ್ಲಿ ಕೇಸುದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply