LATEST NEWS
ಬಂಡಾಯ ಅಭ್ಯರ್ಥಿ ಯಾಗುವಷ್ಟು ಚಿಲ್ಲರೆ ನಾನಲ್ಲ – ಶಾಸಕ ಸುಕುಮಾರ ಶೆಟ್ಟಿ

ಕುಂದಾಪುರ ಎಪ್ರಿಲ್ 14: ಟಿಕೆಟ್ ಸಿಗದಿರುವುದಕ್ಕೆ ನನಗೆ ಯಾವುದೇ ಬೇಸರವಿಲ್ಲ, ಆದರೆ ನಡೆಸಿಕೊಂಡ ರೀತಿ ಬಗ್ಗೆ ಬೇಸರವಿಗೆ ಎಂದು ಬೈಂದೂರಿನ ಹಾಲಿ ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಬೇಸರ ವ್ಯಕ್ತಪಡಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು ಟಿಕೆಟ್ ಇಲ್ಲ ಎಂದು 3 ತಿಂಗಳು ಮೊದಲೇ ಹೇಳ ಬಹುದಿತ್ತು. ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಕರೆ ಮಾಡಿ ಬನ್ನಿ ಎಂದಿದ್ದರು. ಬರುವುದಿಲ್ಲ ಅಂದಿದ್ದೇನೆ. ಬಿಎಸ್ವೈ ಹಾಗೂ ಸಿಎಂ ಬೊಮ್ಮಾಯಿ ಕರೆ ಮಾಡಿ, ನಾವು ನಿಮ್ಮೊಂದಿಗಿದ್ದೇವೆ. ಟಿಕೆಟಿಗಾಗಿ ನಾವು ಪ್ರಯತ್ನಿಸಿದ್ದು, ದುಡುಕಿನ ನಿರ್ಧಾರ ಕೈಗೊಳ್ಳಬೇಡಿ ಎಂದಿದ್ದಾರೆ. ಬಂಡಾಯ ಅಭ್ಯರ್ಥಿ ಯಾಗುವಷ್ಟು ಚಿಲ್ಲರೆ ನಾನಲ್ಲ ಎಂದರು.

ಬೈಂದೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಜನಸಾಮಾನ್ಯರ ನೋವಿಗೆ, ಸಂಕಷ್ಟಕ್ಕೆ ಸ್ಪಂದಿಸಿರುವ ತೃಪ್ತಿಯಿದೆ. ಕಾರ್ಯಕರ್ತರ ಪ್ರೀತಿಗೆ ಸದಾ ಋಣಿ. 5 ವರ್ಷ ಕ್ಷೇತ್ರದ ಜನರ ಸೇವೆಯ ಅವಕಾಶ ಸಿಕ್ಕಿರುವುದು ನನ್ನ ಭಾಗ್ಯ. ಇಷ್ಟೇ ನನ್ನ ಯೋಗ ಎಂದರು.