Connect with us

    LATEST NEWS

    ರಸ್ತೆ ಬದಿ ನಿಂತಿದ್ದ ಮೂವರು ಕಾರ್ಮಿಕರ ಬಲಿ ಪಡೆದ ಕಾರು….!!

    ಸುಳ್ಯ ಅಗಸ್ಟ್ 31: ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಕಾರ್ಮಿಕರು ಸಾವನಪ್ಪಿದ ಘಟನೆ ಅಡ್ಕಾರಿನಲ್ಲಿ ಬೆಳ್ಳಂಬೆಳಗ್ಗೆ ನಡೆದಿದೆ.


    ಮೃತರನ್ನು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿಗಳು ಎಂದು ತಿಳಿದು ಬಂದಿದೆ. ಕಾರ್ಮಿಕರು ಕೆಲಸದ ನಿಮಿತ್ತ ನಿನ್ನೆ ಅಡ್ಕಾರಿಗೆ ಆಗಮಿಸಿ ಕರಾವಳಿ ಹೋಟೆಲ್ ಎದುರುಗಡೆ ಇರುವ ಅಂಗಡಿಯೊಂದರ ವರಾಂಡದಲ್ಲಿ ಆಶ್ರಯ ಪಡೆದಿದ್ದರು. ಅದರಲ್ಲಿ ನಾಲ್ಕು ಮಂದಿ ಕಾರ್ಮಿಕರು ರಸ್ತೆ ಬದಿ ನಿಂತಿದ್ದರೆನ್ನಲಾಗಿದೆ.

    ಇಂದು ಬೆಳಗ್ಗೆ ಹುಣಸೂರು ಕಡೆಯಿಂದ ಬಂದ ಕಾರೊಂದು ವಿರುದ್ಧ ದಿಕ್ಕಿನಲ್ಲಿ ಚಲಿಸಿ ರಸ್ತೆ ಬದಿ ನಿಂತಿದ್ದ ನಾಲ್ವರು ಕಾರ್ಮಿಕರಿಗೆ ಡಿಕ್ಕಿ ಹೊಡೆದು ಮೂರು ಜನ ಕಾರ್ಮಿಕರು ಗಂಭೀರವಾಗಿ ಗಾಯಗೊಂಡ ಸಾವನಪ್ಪಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply