DAKSHINA KANNADA
ಮಗನನ್ನು ವಿಮಾನ ನಿಲ್ದಾಣಕ್ಕೆ ಡ್ರಾಪ್ ಮಾಡಿ ಬರುವಾಗ ಕಾರು ಪಲ್ಟಿ – ಅಪ್ಪ ಸಾವು
ಸುಳ್ಯ ಅಗಸ್ಟ್ 22: ಮಗನನ್ನು ಮಂಗಳೂರು ವಿಮಾನ ನಿಲ್ದಾಣಕ್ಕೆ ಬಿಟ್ಟು ಬರುತ್ತಿರುವ ವೇಳೆ ಕಾರು ಪಲ್ಟಿಯಾಗಿ ಅಪ್ಪ ಸಾವನಪ್ಪಿದ ಘಟನೆ ಸಂಪಾಜೆ ಗ್ರಾಮದ ದೊಡ್ಡಡ್ಕ ನಡೆದಿದೆ.
ಮೃತರನ್ನು ವಿರಾಜಪೇಟೆಯ ಗಣೇಶ್ (64) ಎಂದು ಗುರುತಿಸಲಾಗಿದೆ. ಇವರು ತಮ್ಮ ಮಗನನ್ನು ಮಂಗಳೂರಿನ ಏರ್ಪೋರ್ಟ್ಗೆ ಬಿಟ್ಟು ಬರುತ್ತಿದ್ದ ಸಂದರ್ಭ ಈ ಅಪಘಾತ ಸಂಭವಿಸಿದ್ದು, ಅಪಘಾತದ ಪರಿಣಾಮ ಗಣೇಶ್ ಅವರಿಗೆ ಎದೆಗೆ ಗಂಭೀರ ಗಾಯಗಳಾಯಿತು. ಕೂಡಲೇ ಅವರನ್ನು ಸುಳ್ಯದ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರೆಂದು ತಿಳಿದು ಬಂದಿದೆ. ಕಾರಿನಲ್ಲಿದ್ದ ಮಗಳು, ಅಳಿಯ ಮತ್ತು ಇನ್ನೋರ್ವ ಪ್ರಯಾಣಿಕರಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
You must be logged in to post a comment Login