DAKSHINA KANNADA
ಸುಳ್ಯ : ಮೇಯಿಸಲು ಕೊಂಡೊಯ್ಯುತಿದ್ದಾಗ ದನ ಮೈ ಮೇಲೆ ಬಿದ್ದು ವ್ಯಕ್ತಿ ಮೃತ್ಯು..!
ಸುಳ್ಯ : ಸಾಕು ದನವನ್ನು ತೋಟದ ಬದಿಯಲ್ಲಿ ಕರೆದೊಯ್ಯುತ್ತಿದ್ದ ವೇಳೆ ದನ ಮೈಮೇಲೆ ಬಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದ ವ್ಯಕ್ತಿ ಸಾವನ್ನೊಪ್ಪಿದ ದಾರುಣ ಘಟನೆ ದಕ್ಷಿಣ ಕನ್ನಡದ ಸುಳ್ಯದ ಚೊಕ್ಕಾಡಿಯಲ್ಲಿ ನಡೆದಿದೆ.
ಸುಳ್ಯ ತಾಲೂಕು ಅಮರಪಡ್ನೂರು ಗ್ರಾಮದ ಚೊಕ್ಕಾಡಿಯ ನಿವಾಸಿ ನಡುಗಲ್ಲು ರಾಧಾಕೃಷ್ಣ ಎಂಬವರು ಸಾವನ್ನಪ್ಪಿದ ವ್ಯಕ್ತಿಯಾಗಿದ್ದಾರೆ. ತಮ್ಮ ದನವನ್ನು ಮೇಯಿಸಲು ಕಟ್ಟಿ ಹಾಕಲು ತೋಟದ ಬದಿಯಲ್ಲಿ ಕರೆದೊಯ್ಯುತ್ತಿರುವಾಗ ಇಳಿಜಾರಿನಲ್ಲಿ ರಾಧಾಕೃಷ್ಣ ಅವರು ಕಾಲು ಜಾರಿ ಬಿದ್ದಿದ್ದಾರೆ. ಈ ಸಂದರ್ಭ ದನದ ಹಗ್ಗ ಅವರ ಕೈಯಲ್ಲಿದ್ದುದರಿಂದ ಎಳೆಯಲ್ಪಟ್ಟು ದನ ರಾಧಾಕೃಷ್ಣರ ಮೈಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಸ್ಥಳಕ್ಕೆ ಧಾವಿಸಿ ಬಂದ ಮನೆಯವರು ಸ್ಥಳೀಯರ ನೆರವಿನಿಂದ ಅವರನ್ನು ಮೇಲಕ್ಕೆತ್ತಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದರು. ಆದ್ರೆ ಗುರುವಾರ ಚಿಕಿತ್ಸೆಗೆ ಸ್ಪಂದಿಸದೇ ರಾಧಾಕೃಷ್ಣ ಅವರು ಕೊನೆಯುಸಿರೆಳೆದರೆಂದು ತಿಳಿದುಬಂದಿದೆ.
You must be logged in to post a comment Login