Connect with us

    DAKSHINA KANNADA

    ಸುಳ್ಯ ಗ್ಯಾರಂಟಿ ಸಮಾವೇಶಕ್ಕೆ ಆಹ್ವಾನಿಸದಕ್ಕೆ ವೇದಿಕೆಯಲ್ಲೇ ಉಸ್ತುವಾರಿ ಸಚಿವರನ್ನು ಪ್ರಶ್ನಿಸಿದ ಜಿ.ಕೃಷ್ಣಪ್ಪ

    ಪುತ್ತೂರು ಮಾರ್ಚ್ 10: ಕಾರ್ಯಕ್ರಮಕ್ಕೆ ಆಹ್ವಾನಿಸದಕ್ಕೆ ಸುಳ್ಯದ ಕಾಂಗ್ರೇಸ್ ಪರಾಜಿತ ಅಭ್ಯರ್ಥಿ ಜಿ. ಕೃಷ್ಣಪ್ಪ ವೇದಿಕೆಯಲ್ಲೇ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಎದುರು ಏರು ಧ್ವನಿಯಲ್ಲಿ ತಗಾದೆ ತೆಗೆದ ಘಟನೆ ನಡೆದಿದೆ.


    ಸುಳ್ಯದ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ಇಂದು ನಡೆದ ಕಾಂಗ್ರೇಸ್ ಸರಕಾರದ ಪಂಚ ಗ್ಯಾರೆಂಟಿ ಸಮಾವೇಶದಲ್ಲಿ ಈ ಘಟನೆ ನಡೆದಿದೆ. ಸರಕಾರದ ಈ ಕಾರ್ಯಕ್ರಮಕ್ಕೆ ತನನ್ನು ಆಹ್ವಾನಿಸಿಲ್ಲ ಎಂದು ಸುಳ್ಯದಲ್ಲಿ ಕಾಂಗ್ರೇಸ್ ಅಭ್ಯರ್ಥಿಯಾಗಿ ಚುನಾವಣೆಗೆ ನಿಂತಿದ್ದ ಎಐಸಿಸಿ ಅಧ್ಯಕ್ಷ ಖರ್ಗೆ ಆಪ್ತ ಜಿ.ಕೃಷ್ಣಪ್ಪ ವೇದಿಕೆಯಲ್ಲಿ ಕುಳಿತಿದ್ದ ಜಿಲ್ಲಾ ಉಸ್ತುವಾರಿ ಸಚಿವರನ್ನು ಏರು ದ್ವನಿಯಲ್ಲಿ ಪ್ರಶ್ನಿಸಿದ್ದಾರೆ.


    ಸಭೆಯಲ್ಲಿ ಕುಳಿತಿದ್ದ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಮತ್ತು ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿರವವರ ಬಳಿ ತೆರಳಿದ ಕೃಷ್ಣಪ್ಪ ಏರು ಧ್ವನಿಯಲ್ಲಿ ಪ್ರಶ್ನೆ ಮಾಡಿ, ಕಾರ್ಯಕ್ರಮಕ್ಕೆ ಆಹ್ವಾನಿಸದ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
    ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಎದುರು ಜಿ.ಕೃಷ್ಣಪ್ಪ ಅವರನ್ನು ನಿಲ್ಲಿಸಲಾಗಿತ್ತು. ಈ ವೇಳೆ ಸ್ವಪಕ್ಷದ ಕಾರ್ಯಕರ್ತರಲ್ಲೇ ವಿರೋಧ ಇತ್ತು.

    Share Information
    Advertisement
    Click to comment

    You must be logged in to post a comment Login

    Leave a Reply