DAKSHINA KANNADA
ಸುಳ್ಯ ಕಾಂಗ್ರೇಸ್ ಅಭ್ಯರ್ಥಿ ವಿರುದ್ದ ಬುಗಿಲೆದ್ದ ಅಸಮಧಾನ..ಮಂಗಳೂರಿಗೆ 15 ಬಸ್ ನಲ್ಲಿ ಬಂದು ಪ್ರತಿಭಟನೆ
ಸುಳ್ಯ ಮಾರ್ಚ್ 29: ಕಾಂಗ್ರೇಸ್ ತನ್ನ ಮೊದಲ ಪಟ್ಟಿ ಘೋಷಣೆ ಮಾಡುತ್ತಿರುವಂತೆ ಅಸಮಧಾನ ಹೊಗೆಯಾಡಲಾರಂಭಿಸಿದ್ದು, ದಕ್ಷಿಣಕನ್ನಡ ಜಿಲ್ಲೆಯ ಮೀಸಲು ಕ್ಷೇತ್ರ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಜಿಗಣಿ ಕೃಷ್ಣಪ್ಪ ಅವರನ್ನು ಬದಲಿಸಬೇಕೆಂಬ ಕೂಗು ಕೇಳಿ ಬಂದಿದೆ.
ಕೆಪಿಸಿಸಿ ಘೋಷಿಸಿರುವ ಅಭ್ಯರ್ಥಿ ಜಿಗಣಿ ಕೃಷ್ಣಪ್ಪ ಅವರನ್ನು ಬದಲಿಸಬೇಕು ಎಂದು ಒತ್ತಾಯಿಸಿ ಸುಳ್ಯ ಭಾಗದ ಕಾಂಗ್ರೆಸ್ ಕಾರ್ಯಕರ್ತರು 15 ಬಸ್ ಗಳಲ್ಲಿ ಮಂಗಳೂರಿಗೆ ಬಂದು ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆಗೆ ಕುಳಿತಿದ್ದಾರೆ. ‘ನಾಯಕರ ಅಭ್ಯರ್ಥಿ ನಮಗೆ ಬೇಡ, ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡಬೇಕು’. ‘ನಂದಕುಮಾರ್ ಅವರಿಗೆ ಬಿ ಫಾರ್ಮ್ ಕೊಡಿ, ಸುಳ್ಯದಲ್ಲಿ ಕಾಂಗ್ರೆಸ್ ಗೆಲ್ಲಿಸಿಕೊಡುತ್ತೇವೆ’ ಎಂದು ಕಾಂಗ್ರೆಸ್ ಕಾರ್ಯಕರ್ತರು ಫಲಕಗಳನ್ನು ಹಿಡಿದು ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆಗೆ ಕುಳಿತಿದ್ದಾರೆ. ಈ ಕುರಿತು ಪಕ್ಷದ ವರಿಷ್ಠರು ನ್ಯಾಯ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ.
You must be logged in to post a comment Login