Connect with us

DAKSHINA KANNADA

ಸುಳ್ಯ ಮಸೂದ್ ಕೊಲೆ ಪ್ರಕರಣ – ಇಬ್ಬರು ಅರೋಪಿಗಳಿಗೆ ಹೈಕೋರ್ಟ್ ಜಾಮೀನು..!

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬೆಳ್ಳಾರೆಯಲ್ಲಿ 2022 ರ ಜುಲೈ ತಿಂಗಳಲ್ಲಿ ನಡೆದಿದ್ದ ಮಸೂದ್ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಇಬ್ಬರು ಆರೋಪಿಗಳಿಗೆ ರಾಜ್ಯ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಕೊಲೆಯಾದ ಮಸೂದ್

ಬೆಳ್ಳಾರೆ ಸಮೀಪದ ಕಳೆಂಜ ಎಂಬಲ್ಲಿ ಮಸೂದ್ ಕೊಲೆ ಕೃತ್ಯ ನಡೆದಿತ್ತು. ಈ ಪೈಕಿ ಅಭಿಲಾಷ್ ಮತ್ತು ಸುನಿಲ್ ಇವರಿಗೆ ಈಗ ಜಾಮೀನು ಲಭಿಸಿದೆ. ಆರು ಮಂದಿಗೆ ಈ ಮೊದಲೇ ಜಾಮೀನು ಸಿಕ್ಕಿತ್ತು. ಈ ಪ್ರಕರಣಕ್ಕೆ ಸಂಬ0ಧಿಸಿ ಒಟ್ಟು ಎಂಟು ಮಂದಿಯನ್ನು ಬಂಧಿಸಲಾಗಿತ್ತು.

ಕೊಲೆ ಆರೋಪಿಗಳು

ಜಾಮೀನು ಅರ್ಜಿಯನ್ನು ಪರಿಗಣಿಸಿದ ಕರ್ನಾಟಕದ ಉಚ್ಚ ನ್ಯಾಯಾಲಯದ ಏಕಸದಸ್ಯ ಪೀಠದ ಜಸ್ಟಿಸ್ ವಿಶ್ವಜೀತ್ ಎಸ್ ಶೆಟ್ಟಿ, ಒಂದು ವರ್ಷದ ಮೇಲೆ ಆರೋಪಿಯಾಗಿ ಜೈಲಿನಲ್ಲಿದ್ದಾರೆಂಬ ವಾದಕ್ಕೆ ಪುರಸ್ಕರಿಸಿದ್ದಾರೆ.ಆರೋಪಿಗಳ ಪರವಾಗಿ ಹಿರಿಯ ವಕೀಲ ಅರುಣ್ ಶಾಮ್ ವಾದ ಮಂಡಿಸಿದ್ದರು. ವಕೀಲರಾದ ಸುಯೋಗ್ ಹೇರಳೆ ಮತ್ತು ನಿಶಾಂತ್ ಕುಶಾಲಪ್ಪ ವಕಾಲತ್ತು ವಹಿದ್ದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *