DAKSHINA KANNADA
ಸುಳ್ಯ – ಜಾಗದ ವಿಚಾರಕ್ಕೆ ತಂದೆ ತಾಯಿ ಮೇಲೆ ಕತ್ತಿಯಿಂದ ಹಲ್ಲೆ ಮಾಡಿದ ಮಗ
ಸುಳ್ಯ ನವೆಂಬರ್ 21: ತಂದೆ ತಾಯಿಯ ಮೇಲೆ ಮಗ ಕತ್ತಿಯಿಂದ ಹಲ್ಲೆ ಮಾಡಿದ ಘಟನೆ ಬೆಳ್ಳಾರೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಗನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಂಧಿತ ಆರೋಪಿಯನ್ನು ದೇವಿ ಪ್ರಸಾದ್ ಎಂದು ಗುರುತಿಸಲಾಗಿದೆ. ಈತ ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಲಗದ್ದೆ ನಿವಾಸಿಗಳಾದ ಮಂಜುನಾಥ್ ಆಚಾರ್, ಧರ್ಮಾವತಿ ದಂಪತಿ ಪುತ್ರ.ಜಾಗದ ವಿಚಾರಕ್ಕೆ ಸಂಬಂಧಪಟ್ಟಂತೆ ತಂದೆ-ತಾಯಿಯ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ್ದಾನೆ ಎಂದು ತಿಳಿದು ಬಂದಿದೆ.
ಘಟನೆಯಲ್ಲಿ ಮಂಜುನಾಥ್ ಆಚಾರ್, ಧರ್ಮಾವತಿ ದಂಪತಿ ಗಂಭೀರ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
You must be logged in to post a comment Login