DAKSHINA KANNADA
ಸುಳ್ಯ: ಚಲಿಸುತ್ತಿದ್ದ ಲಾರಿಯಡಿ ಹಾರಿ ಸೂಸೈಡ್ಗೆ ಯತ್ನಿಸಿದ ಯುವಕ
ಸುಳ್ಯ, ಎಪ್ರಿಲ್ 20: ಚಲಿಸುತ್ತಿದ್ದ ಲಾರಿಯ ಚಕ್ರದಡಿಗೆ ಯುವಕನೋರ್ವ ಹಾರಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಗಾಯಗೊಂಡ ಘಟನೆ ಸುಳ್ಯದ ಗಾಂಧಿನಗರದಲ್ಲಿ ಇಂದು ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ದೃಶ್ಯ ಸಿಸಿ ಕ್ಯಾಮಾರಾದಲ್ಲಿ ದಾಖಲಾಗಿದೆ.
ಉತ್ತರಕನ್ನಡ ಮೂಲದ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ ಯುವಕ, ಇಂದು ಮಧ್ಯಾಹ್ನದ ವೇಳೆ ತೆಂಗಿನಕಾಯಿ ತುಂಬಿಸಿಕೊಂಡು ಬರುತ್ತಿದ್ದ ಲಾರಿ ಸುಳ್ಯ ಪೇಟೆಯ ಗಾಂಧಿನಗರ ಬಳಿ ತಲುಪುತ್ತಿದ್ದಂತೆ ರಸ್ತೆ ಬದಿ ನಿಂತಿದ್ದ ಯುವಕನೋರ್ವ ಏಕಾಏಕಿ ರಸ್ತೆ ಮಧ್ಯೆ ಬಂದು ಲಾರಿಯ ಚಕ್ರದಡಿಗೆ ಹಾರಿದ್ದಾನೆ. ತಕ್ಷಣ ಎಚ್ಚೆತ್ತ ಲಾರಿ ಚಾಲಕ ಲಾರಿ ನಿಲ್ಲಿಸಿದ್ದಾನೆ.
ಘಟನೆಯಿಂದ ಯುವಕನ ತಲೆ ಹಾಗೂ ಕಾಲಿಗೆ ಗಂಭೀರ ಗಾಯವಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ದೃಶ್ಯ ಸಿಸಿ ಕ್ಯಾಮಾರಾದಲ್ಲಿ ಸೆರೆಯಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
You must be logged in to post a comment Login