LATEST NEWS
ಮಂಗಳೂರು ಮುಸ್ಲಿಂ ಫೇಸ್ ಬುಕ್ ಪೇಜ್ ವಿರುದ್ದ ಸುಮೋಟೋ ಕೇಸ್
ಮಂಗಳೂರು ಮುಸ್ಲಿಂ ಫೇಸ್ ಬುಕ್ ಪೇಜ್ ವಿರುದ್ದ ಸುಮೋಟೋ ಕೇಸ್
ಮಂಗಳೂರು ನವೆಂಬರ್ 11 : ಕೇಂದ್ರ ಸಚಿವ ಅನಂತ ಕುಮಾರ್ ನಿಧನಕ್ಕೆ ಅವಹೇಳನಕಾರಿಯಾಗಿ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಬರಹದ ಹಿನ್ನಲೆಯಲ್ಲಿ ಮಂಗಳೂರು ಮುಸ್ಲಿಂ ಫೇಸ್ ಬುಕ್ ಪೇಜ್ ವಿರುದ್ದ ಮಂಗಳೂರು ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೇಂದ್ರ ಸಚಿವ ಅನಂತ್ ಕುಮಾರ್ ನಿಧನದ ಹಿನ್ನಲೆಯಲ್ಲಿ ಮಂಗಳೂರು ಮುಸ್ಲಿಂ ಫೇಸ್ ಬುಕ್ ಪೇಜ್ ನಲ್ಲಿ ಸಂಭ್ರಮಿಸಿ ಬರಹಗಳನ್ನು ಬರೆದಿದ್ದರು. ಈ ಕುರಿತಂತೆ ಮಂಗಳೂರು ಮುಸ್ಲಿಂ ಫೇಸ್ ಬುಕ್ ಪೇಜ್ ವಿರುದ್ದ ಆಕ್ರೋಶ ವ್ಯಕ್ತವಾಗಿತ್ತು.
ಈ ಹಿನ್ನಲೆಯಲ್ಲಿ ಮಂಗಳೂರು ಮುಸ್ಲಿಂ ಫೇಸ್ಬುಕ್ ಪೇಜ್ ವಿರುದ್ಧ ಮಂಗಳೂರು ಪಾಂಡೇಶ್ವರ ಪೊಲೀಸರು ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡಿದ್ದು, ಐಟಿ ಆಕ್ಟ್ ಅಡಿಯೂ ಕ್ರಮ ತೆಗೆದುಕೊಳ್ಳಲು ಚಿಂತನೆ ನಡೆಸಿದ್ದಾರೆ.
ಈ ದಿನ ಮಾನ್ಯ ಕೇಂದ್ರ ಮಂತ್ರಿಗಳಾದ ಶ್ರೀ ಅನಂತಕುಮಾರ್ ಅವರು ನಿಧನರಾದ ಬಗ್ಗೆ Mangalore Muslims ಎನ್ನುವ Facebook ಪುಟದಲ್ಲಿ ಅವಹೇಳನಕಾರಿ ಹಾಗೂ ದ್ವೇಷಪೂರಿತ ಪೊಸ್ಟ್ ಗಳನ್ನು ಮಾಡಿದ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿ ತನಿಖೆಯನ್ನು ಕೈಗೊಳ್ಳಲಾಗಿದೆ.
— N. Shashi Kumar CP Mangaluru City (@compolmlr) November 12, 2018
You must be logged in to post a comment Login