Connect with us

    LATEST NEWS

    5, 8, 9 ಮತ್ತು 11ನೇ ತರಗತಿ ವಿಧ್ಯಾರ್ಥಿಗಳಿಗೆ ಮತ್ತೆ ಸಂಕಷ್ಟ – ಫಲಿತಾಂಶ ಪ್ರಕಟಿಸದಂತೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ

    ನವದೆಹಲಿ ಎಪ್ರಿಲ್ 08 : 5,8,9 ಮತ್ತು 11 ನೇ ತರಗತಿಯ ವಿಧ್ಯಾರ್ಥಿಗಳು ಮತ್ತೆ ಸಂಕಷ್ಟದಲ್ಲಿ ಸಿಲುಕಿದ್ದು, ಪರೀಕ್ಷೆ ನಡೆಸಲು ಕೋರ್ಟ್ ಆದೇಶಕ್ಕೆ ಕಾದಿದ್ದ ವಿದ್ಯಾರ್ಥಿಗಳು ಇದೀಗ ಫಲಿತಾಂಶಕ್ಕಾಗಿ ಮತ್ತೆ ಕೋರ್ಟ್ ಆದೇಶ ನೋಡುತ್ತಿದ್ದಾರೆ.


    ರಾಜ್ಯದ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿರುವ ಕರ್ನಾಟಕ ಹೈಕೋರ್ಟ್​ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ.

    ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಪಂಕಜ್ ಮಿಥಾಲ್ ಅವರನ್ನೊಳಗೊಂಡ ನ್ಯಾಯಪೀಠವು, ಈ ತರಗತಿಗಳ ಪರೀಕ್ಷೆಗಳ ಫಲಿತಾಂಶ ಘೋಷಣೆಗೆ ತಡೆ ನೀಡಿದೆ. ಸದ್ಯ ಯಾವುದೇ ಶಾಲೆಗಳು ಸಹ ಫಲಿತಾಂಶ ಪ್ರಕಟಿಸಬಾರದು. ಮುಂದಿನ ಆದೇಶದವರೆಗೆ ಕಾಯಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಮಾರ್ಚ್​ನಲ್ಲಿ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಆದೇಶ ನೀಡಿದ್ದ ಹೈಕೋರ್ಟ್, ಸ್ಥಗಿತಗೊಂಡಿರುವ ಪರೀಕ್ಷೆ ಮುಂದುವರಿಸಲು ಸೂಚನೆ ನೀಡಿತ್ತು. ಅದರಂತೆ ಶಾಲೆಗಳು ಪರೀಕ್ಷೆಗಳನ್ನು ನಡೆಸಿದ್ದವು. ಇದೀಗ ಫಲಿತಾಂಶ ಪ್ರಕಟವಾಗುವ ಸಂದರ್ಭದಲ್ಲೇ ಸುಪ್ರೀಂ ಕೋರ್ಟ್ ತಡೆಯಾಜ್ಞೆ ಬಂದಿದೆ.

    Share Information
    Advertisement
    Click to comment

    You must be logged in to post a comment Login

    Leave a Reply