Connect with us

    DAKSHINA KANNADA

    ಸುರತ್ಕಲ್: ಕಾಂಪೌಂಡ್‌ ಕುಸಿದು ಓರ್ವ ಮೃತ್ಯು, ಇನ್ನೋರ್ವ ಗಂಭೀರ

    ಸುರತ್ಕಲ್, ಆಗಸ್ಟ್ 30:‌ ರಸ್ತೆ ಬದಿಯಲ್ಲಿ ಚರಂಡಿ ಮಾಡುತ್ತಿದ್ದ ವೇಳೆ ಕಾಂಪೌಂಡ್‌ ಕುಸಿದು ಓರ್ವ ಮೃತಪಟ್ಟು, ಇನ್ನೋರ್ವ ಗಾಯಗೊಂಡಿರುವ ಘಟನೆ ಕೃಷ್ಣಾಪುರದ ಕೆಇಬಿ ಬಳಿ ಬುಧವಾರ ನಡೆದಿದೆ.

    ಮೃತರು ಬಜ್ಪೆ ಕರಂಬಾರು ನಿವಾಸಿ ಹನೀಫ್ ಎಂದು ತಿಳಿದು ಬಂದಿದ್ದು, ಮಣಿ ಎಂಬವರು ಗಾಯಗೊಂಡಿದ್ದಾರೆ. ಕೃಷ್ಣಾಪುರ ನಿವಾಸಿ ಶರೀಫ್‌ ಎಂಬವರು ರಸ್ತೆ ಬದಿ ಚರಂಡಿ ನಿರ್ಮಾಣದ ಗುತ್ತಿಗೆ ಪಡೆದುಕೊಂಡು ಕೆಲಸ ಮಾಡಿಸುತ್ತಿದ್ದರು ಎಂದು ತಿಳಿದುಬಂದಿದೆ.

    ಹನೀಫ್ ಮತ್ತು ಮಣಿ ಅವರು ಚರಂಡಿ ಅಗೆಯುತ್ತಿದ್ದ‌ ವೇಳೆ ಏಕಾಏಕಿ ಪಕ್ಕದಲ್ಲಿದ್ದ ಕಾಂಪೌಂಡ್ ಗೋಡೆ ಕುಸಿದು ಕೆಲಸಗಾರರ ಮೇಲೆ ಬಿದ್ದಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಷ್ಟರಲ್ಲಾಗಲೇ ಹನೀಫ್ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

    ಮಣಿ ಅವರಿಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಬಳಿಕ ಮುಕ್ಕದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಹನೀಫ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಗೆ ಸಂಬಂಧಿಸಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply