Connect with us

    DAKSHINA KANNADA

    ಸುರತ್ಕಲ್ : ನೀರುಪಾಲಾಗಿದ್ದ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ಪರಿಹಾರ ಚೆಕ್ ವಿತರಿಸಿದ ಮೊಯ್ದಿನ್ ಬಾವಾ..!

    ಸುರತ್ಕಲ್:‌ ಈಜಲು ಹೋಗಿ ನೀರುಪಾಲಾಗಿದ್ದ ಸುರತ್ಕಲ್‌ ವಿದ್ಯಾದಾಯಿನಿ ಶಾಲೆಯ ನಾಲ್ವರು ವಿದ್ಯಾರ್ಥಿಗಳ ಪೋಷಕರಿಗೆ ರಾಜ್ಯ ಸರಕಾರದ ಮುಖ್ಯಮಂತ್ರಿ ಪರಿಹಾರ ನಿಧಿಯ ಪರಿಹಾರದ ಚೆಕ್‌ ಗಳನ್ನು ಮಾಜಿ ಶಾಸಕ ಮೊಯ್ದೀನ್‌ ಬಾವ ವಿತರಿಸಿದರು.

    ಸುರತ್ಕಲ್ ಶಾಲೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪರಿಹಾರದ ಆದೇಶ ಪ್ರತಿಗಳನ್ನು ಮೃತ ವಿದ್ಯಾರ್ಥಿಗಳ ಪೋಷಕರಿಗೆ ಹಸ್ತಾಂತರಿಸಿ ಮಾತನಾಡಿದ ಬಾವಾ, ಪೋಷಕರು ಮಕ್ಕಳ ಬಗ್ಗೆ ಜಾಗೃತೆ ವಹಿಸಬೇಕು. ಮಕ್ಕಳೊಂದಿಗೆ ಅವರ ಸ್ನೇಹಿತರಂತೆ ವ್ಯವಹರಿಸುವ ಮೂಲಕ ಅವರ ಚಲನ ವಲನಗಳ ಮೆಳೆ ನಿಗಾ ಇಡಬೇಕೆಂದು ಮನವಿ ಮಾಡಿದರು.

    ಪರಿಹಾರಕ್ಕೆ ವಿಶೇಷ ಮುತುವರ್ಜಿ ವಹಿಸಿದ್ದ ಬಾವಾ
    ಇತ್ತೀಚೆಗೆ ಈಜಲು ತೆರಳಿ ನೀರು ಪಾಲಾದ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಸುರತ್ಕಲ್ ಹಿಂದೂ ವಿಧ್ಯಾದಾಯಿನಿ ಹೈಸ್ಕೂಲ್ ವಿದ್ಯಾರ್ಥಿಗಳ ಪೋಷಕರಿಗೆ ಪರಿಹಾರ ನಿಧಿಗಾಗಿ ಮಾಜಿ ಶಾಸಕ ಮೊಯ್ದಿನ ಬಾವಾ ವಿಶೇಷ ಮುತುವರ್ಜಿ ವಹಿಸಿದ್ದರು. ಇತ್ತೀಚೆಗೆ ಮುಖ್ಯಮಂತ್ರಿಗಳು ಉಡುಪಿ ಭೇಟಿ ಸಂದರ್ಭದಲ್ಲಿ ಮೃತ ವಿದ್ಯಾರ್ಥಿಗಳ ಪೋಷಕರೊಂದಿಗೆ ಮಾಜಿ ಶಾಸಕ ಬಿ.ಎ. ಮೊಹಿದಿನ್ ಬಾವಾರವರು ಹೆಲಿಪ್ಯಾಡ್ ನಲ್ಲಿ ಭೇಟಿ ಮಾಡಿಸಿ ಕೂಡಲೇ ಸೂಕ್ತ ಪರಿಹಾರವನ್ನು ನೀಡಬೇಕೆಂದು ಮನವಿ ಸಲ್ಲಿಸಿದ್ದರು, ಬಾವಾರವರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ಪರಿಹಾರವನ್ನು ಬಿಡುಗಡೆ ಗೊಳಿಸಿದ್ದಾರೆ,

    Share Information
    Advertisement
    Click to comment

    You must be logged in to post a comment Login

    Leave a Reply