LATEST NEWS
ಪ್ರಿಯತಮೆಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಹೂವಿನ ವ್ಯಾಪಾರಿ
ಸುರತ್ಕಲ್ ನವೆಂಬರ್ 18: ಹೂವಿನ ವ್ಯಾಪಾರಿಯೊಬ್ಬ ತನ್ನ ಪ್ರಿಯತಮೆಯನ್ನು ಹತ್ಯೆಗೈದು ತಾನೂ ಅತ್ಮಹತ್ಯೆ ಮಾಡಿಕೊಂಡ ಘಟನೆ ಸುರತ್ಕಲ್ ನಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ವಸಂತ್(44) ಎಂದು ಗುರುತಿಸಲಾಗಿದೆ. ಈತ ಕುಳಾಯಿ ನಿವಾಸಿಯಾಗಿದ್ದು ಕಳೆದ ಏಳೆಂಟು ವರ್ಷಗಳಿಂದ ಹೂವು ವ್ಯಾಪಾರ ಮಾಡುತ್ತಿದ್ದು ಅಂಗಡಿಗೆ ಹೂವು ಕೊಳ್ಳಲು ಬರುತ್ತಿದ್ದ ಸೂರಿಂಜೆಯ ವಿವಾಹಿತ ಮಹಿಳೆಯ ಪರಿಚಯವಾಗಿ ಅದು ಪ್ರೇಮಕ್ಕೆ ತಿರುಗಿತ್ತು ಎಂದು ಹೇಳಲಾಗಿದೆ.
ಈ ನಡುವೆ ಇಂದು ಯಾವುದೋ ವೈಮನಸ್ಸಿನ ಕಾರಣದಿಂದ ಮಹಿಳೆಯನ್ನು ಕೊಂದು ಈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ. ಸ್ಥಳಕ್ಕೆ ಎಸಿಪಿ ಬೆಳ್ಳಿಯಪ್ಪ ,ಸುರತ್ಕಲ್ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.
You must be logged in to post a comment Login