LATEST NEWS
ಸುರತ್ಕಲ್ ಟೋಲ್ ಸಂಗ್ರಹ ಕೇಂದ್ರ ರದ್ದು : ಸಂಸದ ನಳಿನ್ ಕುಮಾರ್ ಕಟೀಲ್ ಟ್ವೀಟ್
ಮಂಗಳೂರು, ನವೆಂಬರ್ 14: ಭಾರೀ ವಿವಾದಕ್ಕೆ ಕಾರಣವಾಗಿದ್ದ ಮಂಗಳೂರಿನ ಸುರತ್ಕಲ್ ಟೋಲ್ ಸಂಗ್ರಹ ಕೇಂದ್ರ ಕಡೆಗೂ ರದ್ದಾಗಿದೆ.
ಈ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ರವರು ಟ್ವೀಟ್ ಮಾಡಿದ್ದು, “ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವರಿಗೆ ಮತ್ತು ಪ್ರಧಾನಿಗಳಿಗೆ ಧನ್ಯವಾದಗಳು” ಎಂದು ಹೇಳಿದ್ದಾರೆ.
ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಸಚಿವರಾದ ಶ್ರೀ @nitin_gadkari ಹಾಗೂ ಪ್ರಧಾನಿ ಶ್ರೀ @narendramodi ಅವರಿಗೆ ನಾಗರಿಕರ ಪರವಾಗಿ ಧನ್ಯವಾದಗಳು.
ಟೋಲ್ ರದ್ದು ಮಾಡುವ ಭರವಸೆಯನ್ನು ಈ ಮೊದಲೇ ಕೇಂದ್ರ ಸಚಿವರು ನೀಡಿದ್ದು, ಈಗ ತಾಂತ್ರಿಕ ಅಂಶ ಪೂರೈಸಲಾಗಿದೆ.
— Nalinkumar Kateel (@nalinkateel) November 14, 2022
ಟೋಲ್ ರದ್ದು ಮಾಡುವ ಭರವಸೆಯನ್ನು ಈ ಮೊದಲೇ ಕೇಂದ್ರ ಸಚಿವರು ನೀಡಿದ್ದು, ಈಗ ತಾಂತ್ರಿಕ ಅಂಶ ಪೂರೈಸಲಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ರವರು ಟ್ವೀಟ್ ಮಾಡಿದ್ದಾರೆ. ಸುರತ್ಕಲ್ ಟೋಲ್ ಗೇಟ್ ಅನ್ನು ರದ್ದುಗೊಳಿಸುವಂತೆ ಹಲವು ಸಂಘಟನೆಗಳಿಂದ ಜನ ಪ್ರತಿಭಟನೆ ಕೂಡ ನಡೆಸಿದ್ದರು.
You must be logged in to post a comment Login