Connect with us

LATEST NEWS

ಸುರತ್ಕಲ್ ಚಿತ್ರಾಪುರ ಹಲ್ಲೆ ಪ್ರಕರಣ – ಮೂವರು ಆರೋಪಿಗಳು ಅರೆಸ್ಟ್

ಮಂಗಳೂರು ಫೆಬ್ರವರಿ 28: ಸುರತ್ಕಲ್ ನ ಚಿತ್ರಾಪುರದಲ್ಲಿ ಗಾಂಜಾ ಅಮಲಿನಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಮೂವರು ಆರೋಪಿಗಳನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.

ಸಮೀಪದ ಪಣಂಬೂರು ಮೋಗವೀರ ಮಹಾಸಭಾ ವ್ಯಾಪ್ತಿಯ ಸಮುದ್ರ ತೀರದಲ್ಲಿ ಗಾಂಜಾ ಅಮಲಿನಲ್ಲಿ ದುಷ್ಕರ್ಮಿಗಳ ತಂಡ ರಿಕ್ಷಾ ಚಾಲಕನಿಗೆ ಹಲ್ಲೆ ನಡೆಸಿ, ರಿಕ್ಷಾಕ್ಕೆ ಹಾನಿ ಮಾಡಿದ ಘಟನೆಗೆ ಸಂಬಂಧಿಸಿದಂತೆ ಭಾನುವಾರದಂದು ಘಟನೆ ಸಂಬಂಧ ಪ್ರತೀಕ್ ಎಂಬಾತನನ್ನು ಬಂಧಿಸಲಾಗಿತ್ತು. ಸೋಮವಾರ ಮತ್ತಿಬ್ಬರು ಆರೋಪಿಗಳಾದ ಅಮಲ್ ಅಜಯನ್ ಮತ್ತು ನಿಶಾಂತ್ ಬಂಧಿಸಲಾಗಿತ್ತು, ಇತರ ಮೂವರು ಆರೋಪಿಗಳಿಗೆ ಶೋಧ ಕಾರುಅ ಮುಂದುವರಿದಿದೆ.

ಬಂಧಿತರ ವಿರುದ್ದ ಪೊಲೀಸರು ಐಪಿಸಿ ಸೆಕ್ಷನ್ 307 ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಆರ್ ಜೈನ್ ತಿಳಿಸಿದ್ದಾರೆ. ಘಟನೆಯಲ್ಲಿ ಸುನಿಲ್ ಎಂಬ ರಿಕ್ಷಾ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು.ಕಡಲು ಕೊರೆತ ತಡೆಗೆ ಹಾಕಲಾಗಿದ್ದ ಕಲ್ಲುಗಳಲ್ಲಿ ಕಳೆದ ಹಲವು ತಿಂಗಳಿನಿಂದ ಮಾದಕ ವ್ಯಸನಿಗಳು ಅನೈತಿಕ ಚಟುವಟಿಕೆ ನಡೆಸುತ್ತಿದ್ದು, ಈ ಕುರಿತು ಗ್ರಾಮಸ್ಥರು ತೀವ್ರ ಅಸಮಧಾನ ವ್ಯಕ್ತಪಡಿಸಿದ್ದರು.

 

Share Information
Continue Reading
Advertisement
Click to comment

Leave a Reply

Your email address will not be published. Required fields are marked *