LATEST NEWS
ಸುರತ್ಕಲ್ ಮತ ಏಣಿಕೆ ಕೇಂದ್ರದಲ್ಲಿ ಕಾರ್ಯಕರ್ತರಿಂದ ಘೋಷಣೆ – ಮತ ಏಣಿಕೆ ಕೇಂದ್ರ ಸುತ್ತ ಪೊಲೀಸ್ ಬಂದೋಬಸ್

ಮಂಗಳೂರು ಜೂನ್ 04: ಸುರತ್ಕಲ್ ಮತ ಏಣಿಕೆ ಕೇಂದ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೇಸ್ ಕಾರ್ಯಕರ್ತರು ಘೋಷಣೆ ಕೂಗಿದ್ದು, ಸ್ಥಳಕ್ಕೆ ಬಂದ ಪೊಲೀಸರು ಘೋಷಣೆ ಕೂಗದಂತೆ ತಡೆದಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಬಿಗಿ ಬಂದೋಬಸ್ತ್ ಮಾಡಿದ್ದಾರೆ.
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್.ಐ.ಟಿ.ಕೆ ಮಯ ಎಣಿಕೆ ಕೇಂದ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಲರ್ತರಿಂದ ಘೋಷಣೆ ಕೂಗಿದ್ದಾರೆ. ಮೋದಿ ಮೋದಿ ಎಂದು ಘೋಷಣೆ ಕೂಗುತ್ತಿರುವ ಬಿಜೆಪಿ ಕಾರ್ಯಕರ್ತರು, ರಾಗಾ ರಾಗಾ ಎಂದು ಘೋಷಣೆ ಕೂಗುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು, ಘೋಷಣೆ ಕೂಗದಂತೆ ಕಾರ್ಯಕರ್ತರನ್ನು ತಡೆದ ಪೋಲೀಸರು. ಸದ್ಯ ಮತ ಎಣಿಕೆ ಕೇಂದ್ರದ ಸುತ್ತ ಪೋಲೀಸ್ ಬಂದೋಬಸ್ತ್ ಮಾಡಿದ್ದು, ಕಾರ್ಯಕರ್ತರು ಸೇರಿರುವ ಜಾಗದಲ್ಲಿ ಹೆಚ್ಷುವರಿ ಪೋಲೀಸರ ನಿಯೋಜನೆ ಮಾಡಲಾಗಿದೆ
