DAKSHINA KANNADA
ಸುರತ್ಕಲ್ ಟೋಲ್ ಗೇಟ್ ಮುಚ್ಚಲು ವಿವಿಧ ಸಂಘಟನೆಗಳ ಪ್ರತಿಭಟನೆ
ಸುರತ್ಕಲ್ ಟೋಲ್ ಗೇಟ್ ಮುಚ್ಚಲು ವಿವಿಧ ಸಂಘಟನೆಗಳ ಪ್ರತಿಭಟನೆ
ಮಂಗಳೂರು ಸೆಪ್ಟೆಂಬರ್ 21: ಮಂಗಳೂರು ಹೊರವಲಯದ ಸುರತ್ಕಲ್ ನ ಟೋಲ್ ಗೇಟ್ ಮುಚ್ಚಲು ಹಾಗೂ ಹೆದ್ದಾರಿ ಗುಂಡಿಗಳನ್ನು ಮುಚ್ಚುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಎನ್ ಐಟಿಕೆ ಟೋಲ್ ಗೇಟ್ ಬಳಿ ಇಂದು ಪ್ರತಿಭಟನೆ ನಡೆಸಿದರು. ಸುರತ್ಕಲ್ ನ ಟೋಲ್ ಗೇಟ್ ಬಳಿ ಸೇರಿದ ಪ್ರತಿಭಟನಾಕಾರರು ಟೋಲ್ ಗೇಟ್ ವಿರುದ್ದ ಘೋಷಣೆ ಕೂಗಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುನೀರ್ ಕಾಟಿಪಳ್ಳ, ಸುರತ್ಕಲ್ ನ ಟೋಲ್ ಗೇಟ್ ರಾಷ್ಟ್ರೀಯ ಹೆದ್ದಾರಿಯ ನೀತಿ-ನಿಯಮಗಳನ್ನು ಪಾಲಿಸದೇ ಶುಲ್ಕ ವಸೂಲು ಮಾಡುತ್ತಿದೆ ಎಂದು ಆರೋಪಿಸಿದರು , ನಿಯಮ ಭಾಹಿರವಾಗಿ ನಡೆಯುತ್ತಿರುವ ಟೋಲ್ ಗೇಟ್ ಬಂದ್ ಮಾಡಬೇಕೆಂದು ಅವರು ಆಗ್ರಹಿಸಿದರು.
ಹೆದ್ದಾರಿಯನ್ನು ಸಂಪೂರ್ಣ ದುರಸ್ಥಿಗೊಳಿಸಬೇಕು ಎಂದು ಒತ್ತಾಯಿಸಿದ ಅವರು. ಹೆದ್ದಾರಿಯೆಂಬುದು ವರ್ಷದ 365 ದಿನವು ಸುಸ್ಥಿತಿಯಲ್ಲಿಡಬೇಕು. ಹೆದ್ದಾರಿಯಲ್ಲಿ ಸುಂಕ ವಸೂಲಾತಿ ಮಾಡುವ ನಂತರ ಹೆದ್ದಾರಿಯ ಜೊತೆ ಸರ್ವಿಸ್ ರಸ್ತೆ ನಿರ್ಮಾಣ ಮಾಡಬೇಕು ಆಗ್ರಹಿಸಿದರು.
You must be logged in to post a comment Login