LATEST NEWS
ಸುರತ್ಕಲ್ ಟೋಲ್ ಗೇಟ್ ಎನ್ಎಂಪಿಟಿಗೆ ಸ್ಥಳಾಂತರ – ಸಂಸದ ನಳಿನ್ ಕುಮಾರ್ ಕಟೀಲ್
ಮಂಗಳೂರು ಮಾರ್ಚ್ 16: ಕರಾವಳಿಯಲ್ಲಿ ಭಾರೀ ಹೋರಾಟಕ್ಕೆ ಕಾರಣವಾಗಿದ್ದ ಎನ್ಐಟಿಕೆ ಬಳಿ ಇರುವ ಸುರತ್ಕಲ್ ಟೋಲ್ ಗೇಟ್ ಸ್ಥಳಾಂತರಕ್ಕೆ ಕಾಲ ಕೂಡಿ ಬಂದಿದ್ದು, ಸುರತ್ಕಲ್ ಟೋಲ್ ಗೇಟ್ ಅನ್ನು ಎನ್ಎಂಪಿಟಿ ಆವರಣಕ್ಕೆ ಸ್ಥಳಾಂತರಿಸಿ, ಅಲ್ಲಿಗೆ ಬರುವ ಸರಕು ವಾಹನಗಳಿಂದ ಶುಲ್ಕ ವಸೂಲಾತಿ ಮಾಡಲು ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ, ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಅಧಿಕಾರಿಗಳ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸಂಸದರ ಪ್ರಕಟಣೆ ತಿಳಿಸಿದೆ.
ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ನೇತೃತ್ವದಲ್ಲಿ ಮಂಗಳವಾರ ದೆಹಲಿಯ ಸಚಿವರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ . ಸುರತ್ಕಲ್ ಟೋಲ್ ಗೇಟ್ ಸ್ಥಳಾಂತರ / ವಿಲೀನಗೊಳಿಸುವ ಬಗ್ಗೆ ಚರ್ಚಿಸಲಾಗಿದ್ದು, ಸಾರ್ವಜನಿಕರಿಗೆ ತುಂಬಾ ಸಮಸ್ಯೆಯಾಗುತ್ತಿರುವ ದೃಷ್ಠಿಯಿಂದ ಸುರತ್ಕಲ್ ಟೋಲ್ ಗೇಟ್ ಅನ್ನು ಎನ್ಎಂಪಿಟಿ ಆವರಣದ ಒಳಗೆ ಸ್ಥಳಾಂತರಿಸಿ ಸ್ಥಾಪಿಸುವುದು, ಎನ್.ಎಂ.ಪಿ.ಟಿ. ಒಳಗೆ ಬರುವ ಹಾಗೂ ಹೊರಗೆ ಹೋಗುವ ವಾಹನಗಳಿಂದ ಮಾತ್ರ ಟೋಲ್ ಸಂಗ್ರಹಿಸಲು ಸಚಿವರು ಸಭೆಯಲ್ಲಿ ಸೂಚಿಸಿದರು ಎಂದು ಸಂಸದ ನಳಿನ್ ಕುಮಾರ್ ತಿಳಿಸಿದ್ದಾರೆ.
You must be logged in to post a comment Login