Connect with us

    LATEST NEWS

    ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ದಂಪತಿ

    ಉಡುಪಿ ಜುಲೈ 09: ಕ್ರಿಕೆಟಿಗ ಸೂರ್ಯ ಕುಮಾರ್ ಯಾದವ್ ಇಂದು ಉಡುಪಿಯ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಟಿ20 ವಿಶ್ವಕಪ್ ಗೆದ್ದ ಬಳಿಕ ಪತ್ನಿ ದೇವಿಶಾ ಶೆಟ್ಟಿ ಜೊತೆಗೆ ಮಾರಿಗುಡಿ ದೇವಸ್ಥಾನಕ್ಕೆ ಕ್ರಿಕೆಟಿಗ ಸೂರ್ಯಕುಮಾರ್ ಭೇಟಿ ಪೂಜೆ ಸಲ್ಲಿಸಿದ್ದಾರೆ.


    ದೇವಸ್ಥಾನಕ್ಕೆ ಭೇಟಿ ಬಳಿಕ ಮಾತನಾಡಿದ ಸೂರ್ಯಕುಮಾರ್ ಯಾದವ್, ಕಾಪು ಮಾರಿಯಮ್ಮನ ದರ್ಶನ ಮಾಡಿದ ಮೇಲೆ ಮನಸ್ಸಿಗೆ ಬಹಳ ನೆಮ್ಮದಿಯಾಯಿತು. ಪೂಜೆ ಸಲ್ಲಿಕೆ ಮಾಡಿ ಶಾಂತಿ ಪ್ರಾಪ್ತಿಯಾದ ಅನುಭವವಾಯ್ತು.  ‘ಕಾಪುದ ಅಮ್ಮ’ (ಕಾಪುವಿನ ತಾಯಿ) ಎಂದು ತುಳುವಿನಲ್ಲಿ ಮಾತನಾಡಿದ ಕ್ರಿಕೆಟರ್ ಸೂರ್ಯ ಕುಮಾರ್ ಯಾದವ್, ಟೀಮ್ ಇಂಡಿಯಾ ಕಪ್ತಾನನಾಗಿ ಕಾಪುವಿಗೆ ಬನ್ನಿ ಎಂದು ಅರ್ಚಕರು ಪ್ರಾರ್ಥನೆ ಮಾಡಿದರು. ಅದಕ್ಕೆ ಪ್ರತಿಕ್ರಿಯಿಸಿ, ತಂಡದ ಕಪ್ತಾನ ಆಗೋದು ನಮ್ಮ ಕೈಯಲ್ಲಿಲ್ಲ. ದೇಶಕ್ಕಾಗಿ ಚೆನ್ನಾಗಿ ಆಡುವುದು ಮಾತ್ರ ನಮ್ಮ ಗುರಿ. ದೇವರು ಇಚ್ಛಿಸಿದರೆ ಹಣೆಯಲ್ಲಿ ಬರೆದಂತೆ ಆಗುತ್ತದೆ. ಕರಾವಳಿಯ ಬೇರೆ ಬೇರೆ ದೇವಸ್ಥಾನಗಳಿಗೆ ಹೋಗಿದ್ದೇವೆ ಮನಸ್ಸಿಗೆ ಶಾಂತಿ ಸಿಕ್ಕಿದೆ ಎಂದು ಹೇಳಿದರು.


    ಸೂರ್ಯಕುಮಾರ್ ಪತ್ನಿ ದೇವಿಶಾ ಮಾತನಾಡಿ, ಕಾಪು ಮಾರಿಗುಡಿಗೆ ಬಂದು ಮನಸ್ಸಿಗೆ ಖುಷಿಯಾಗಿದೆ. ಐದು ವರ್ಷದ ಹಿಂದೆ ನಾವು ಒಮ್ಮೆ ಉಡುಪಿಗೆ ಬಂದಿದ್ದೆವು. ಮತ್ತೊಮ್ಮೆ ಕಾಪು ಅಮ್ಮನ ಭೇಟಿ ಮಾಡಬೇಕು ಎಂಬ ಇಚ್ಛೆ ಇತ್ತು. ಯಾವುದೇ ಟೂರ್ನಿ ಇಲ್ಲದಿದ್ದರೆ ದೇಗುಲ ಜೀರ್ಣೋದ್ಧಾರ ಕಾರ್ಯಕ್ರಮಕ್ಕೆ ಬರುತ್ತೇವೆ. ಕಾಪು ಮಾರಿಯಮ್ಮನನ್ನು ನೋಡಲು ಪತಿಯನ್ನೂ ಕರೆದುಕೊಂಡು ಬಂದಿದ್ದೇನೆ ಎಂದರು.

    Share Information
    Advertisement
    Click to comment

    You must be logged in to post a comment Login

    Leave a Reply