KARNATAKA
ಶಿವಮೊಗ್ಗದಲ್ಲಿ ಶಂಕಿತ ಉಗ್ರರ ಬಂಧನ: ಮಂಗಳೂರು ಲಿಂಕ್
ಮಂಗಳೂರು, ಸೆಪ್ಟೆಂಬರ್ 20: ಶಿವಮೊಗ್ಗದಲ್ಲಿ ಶಂಕಿತ ಉಗ್ರರ ಬಂಧನವಾಗಿದ್ದು ಸಯ್ಯದ್ ಯಾಸೀನ್ ಅಲಿಯಾಸ್ ಬೈಲು (21) ಹಾಗೂ ಮಾಝ್ ಮುನೀರ್ ಅಹಮದ್ (22) ಬಂಧಿತರಾಗಿದ್ದ ಆರೋಪಿಗಳು.
ಶಿವಮೊಗ್ಗದಲ್ಲಿ ಇತ್ತೀಚೆಗೆ ನಡೆದ ಚಾಕು ಇರಿತ ಪ್ರಕರಣದ ವಿಚಾರಣೆ ವೇಳೆ ಆರೋಪಿಗಳ ಬಗ್ಗೆ ಸುಳಿವು ಸಿಕ್ಕಿದ್ದು, ಯುಎಪಿಎ ಕಾಯ್ದೆಯಡಿ ಬಂಧಿಸಲಾಗಿದೆ. ಇಬ್ಬರನ್ನು ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಸೆಪ್ಟೆಂಬರ್ 29ರವರೆಗೆ ಹೆಚ್ಚಿನ ವಿಚಾರಣೆಗೆ ನ್ಯಾಯಾಲಯ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಿದೆ‘ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ ಮಾಧ್ಯಮದವರಿಗೆ ಮಾಹಿತಿ ನೀಡಿದರು.
ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಆರೋಪಿಗಳು 2020 ಡಿಸೆಂಬರ್ ತಿಂಗಳಲ್ಲಿ ನಡೆದಿದ್ದ ಗೋಡೆ ಬರಹ ಬರೆದ ಪ್ರಕರಣದಲ್ಲಿ ಈ ಹಿಂದೆಯೇ ಇಬ್ಬರು ಅರೆಸ್ಟ್ ಆಗಿದ್ದರು. ಮಂಗಳೂರು ನಗರದ ಬಿಜೈ ಮತ್ತು ಕೋರ್ಟ್ ರಸ್ತೆಯ ಗೋಡೆಯಲ್ಲಿ ಆರೋಪಿಗಳು ಬರಹ ಬರೆದಿದ್ದು ಲಷ್ಕರ್ ಇ ತೋಯ್ಬಾ ಉಘ್ರ ಸಂಘಟನೆಗೆ ಜಿಂದಾಬಾದ್ ಎಂದು ಬರೆದಿದ್ದರು.
ಶಿವಮೊಗ್ಗ ಪೊಲೀಸರಿಂದ ಬಂಧನವಾದ ಶಂಕಿತ ಉಗ್ರನ ಆಪ್ತ ಮಂಗಳೂರು ಮೂಲದ ಅನ್ಸರ್ ಎಂಬ ಯುವಕನನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅನ್ಸರ್ ನನ್ನು ಶಿವಮೊಗ್ಗ ಕ್ಕೆ ಕರೆದುಕೊಂಡು ಹೋಗಿ ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.
You must be logged in to post a comment Login