DAKSHINA KANNADA
ಸ್ವಿಪ್ಟ್ ಕಾರು ಕಂಟೈನರ್ ಲಾರಿ ಅಪಘಾತ – ಓರ್ವ ಸಾವು…!!
ಪುತ್ತೂರು ಜೂನ್ 22: ಸ್ವಿಪ್ಟ್ ಕಾರು ಹಾಗೂ ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಸಾವನಪ್ಪಿ ಐವರು ಗಂಭೀರವಾಗಿ ಗಾಯಗೊಂಡ ಘಟನೆ ಸಂಪಾಜೆ ಸಮೀಪ ದೇವರಕೊಲ್ಲಿಯಲ್ಲಿ ಎಂಬಲ್ಲಿ ನಡೆದಿದೆ. ಮೃತರನ್ನು ಬೆಂಗಳೂರು ನಿವಾಸಿ ರವಿ ಎಂದು ಗುರುತಿಸಲಾಗಿದೆ. ಲಾರಿ ಚಾಲಕ ಸೇರಿದಂತೆ ಕಾರಿನಲ್ಲಿದ್ದ ಉಳಿದ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.
ಸುಳ್ಯ ಮೂಲಕ ಮಂಗಳೂರಿಗೆ ತೆರಳುತ್ತಿದ್ದ ಕಂಟೈನರ್ ಲಾರಿ ಬ್ರೇಕ್ ವೈಫಲ್ಯಗೊಂಡು ಮುಂದೆ ಹೋಗುತ್ತಿದ್ದ ಕಾರಿಗೆ ಢಿಕ್ಕಿಯಾಗಿ ಪಲ್ಟಿಯಾಗಿತ್ತು. ಪರಿಣಾಮ ಕಾರಿನಲ್ಲಿದ್ದ ಓರ್ವ ಮೃತಪಟ್ಟು ಉಳಿದ ನಾಲ್ವರು ಗಾಯಗೊಂಡಿದ್ದಾರೆ ಐವರು ಇದ್ದರು. ಇವರು ಬೆಂಗಳೂರಿನಿಂದ ಮೈಸೂರು ಮೂಲಕ ಧರ್ಮಸ್ಥಳಕ್ಕೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.
ಲಾರಿ ಚಾಲಕ ಮಂಗಳೂರಿನ ಕುಳಾಯಿ ನಿವಾಸಿ ಈಶ್ವರ (42), ಕಾರಿನಲ್ಲಿದ್ದ ಚಂದ್ರಶೇಖರ, ನಿತಿನ್ ಗಂಭೀರ ಗಾಯಗೊಂಡಿದ್ದು, ಕಾರಿನಲ್ಲಿದ್ದ ಜಗದೀಶ್, ಹರ್ಷ ಗಾಯಗೊಂಡಿದ್ದು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಕಾರು ಹಾಗೂ ಕಂಟೈನರ್ ಲಾರಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
You must be logged in to post a comment Login