Connect with us

    KARNATAKA

    ಈಜಲು ಹೋಗಿ ಜೀವ ಕಳೆದುಕೊಂಡ ವಿಧ್ಯಾರ್ಥಿಗಳು…ಇಬ್ಬರು ವಿಧ್ಯಾರ್ಥಿನಿಯರು ಸೇರಿದಂತೆ ಮೂವರ ಸಾವು…!!

    ಚಿಕ್ಕಬಳ್ಳಾಪುರ ಎಪ್ರಿಲ್ 02: ವಿಕೇಂಡ್ ಎಂದು ಪಿಕ್ ನಿಕ್ ಬಂದಿದ್ದ ವಿಧ್ಯಾರ್ಥಿಗಳು ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ಘಟನೆ ಚಿಕ್ಕಬಳ್ಳಾಪುರದ ಶ್ರೀನಿವಾಸ ಸಾಗರ ಜಲಾಶಯದಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಇಮ್ರಾನ್ ಖಾನ್(20), ರಾಧಿಕಾ(19) ಹಾಗೂ ಪೂಜಾ ಎಂದು ಗುರುತಿಸಲಾಗಿದೆ.


    ವೀಕೆಂಡ್ ಎಂದು ಕರ್ನಾಟಕ ಫಾರ್ಮಸಿ ಕಾಲೇಜಿನ ಸುನೀತಾ, ರಾಧಿಕ, ಪೂಜಾ, ಇಮ್ರಾನ್ ಖಾನ್, ವಿಕಾಸ್, ಚನ್ನರಾಮ್ ಎಂಬ ಆರು ವಿದ್ಯಾರ್ಥಿಗಳು ಮೂರು ಬೈಕುಗಳಲ್ಲಿ ಶನಿವಾರ ಬೆಂಗಳೂರಿನಿಂದ ಚಿಕ್ಕಬಳ್ಳಾಪುರದ ಶ್ರೀನಿವಾಸ ಸಾಗರ ಜಲಾಶಯಕ್ಕೆ ಪಿಕ್‌ನಿಕ್ ಬಂದಿದ್ದರು. ಈ ವೇಳೆ ಸುನಿತಾಳನ್ನು ಹೊರತುಪಡಿಸಿ ಉಳಿದ 5 ಮಂದಿ ವಿದ್ಯಾರ್ಥಿಗಳು ಜಲಾಶಯ ಹಿಂಭಾಗದ ಹಿನ್ನೀರಿನಲ್ಲಿ ಈಜಾಡಲು ಹೋಗಿದ್ದು, ರಾಧಿಕಾ, ಪೂಜಾ ಮತ್ತು ಇಮ್ರಾನ್ ಖಾನ್ ಜಲಾಶಯದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

    ನೀರಿನ ಆಳದ ಅರಿವಿರದ ವಿದ್ಯಾರ್ಥಿಗಳು ಒಬ್ಬರನ್ನೊಬ್ಬರು ಕೈ ಹಿಡಿದುಕೊಂಡು ಕೂಗುತ್ತಿದ್ದಂತೆ ಅಲ್ಲೇ ಇದ್ದ ಸ್ಥಳೀಯ ಯುವಕರು ರಕ್ಷಣೆಗೆ ಧಾವಿಸಿದ್ದಾರೆ. ಈ ವೇಳೆ ಚನ್ನರಾಮ್ ಹಾಗೂ ವಿಕಾಸ್ ಎಂಬ ವಿದ್ಯಾರ್ಥಿಗಳನ್ನು ರಕ್ಷಿಸಿದ್ದು, ಪೂಜಾಳನ್ನು ಸಹ ಮೇಲೆ ಎಳೆದುಕೊಂಡು ಬಂದು ಕೂಡಲೇ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೂ ಆಕೆ ಬದುಕುಳಿಯಲಿಲ್ಲ.

    Share Information
    Advertisement
    Click to comment

    You must be logged in to post a comment Login

    Leave a Reply