ಉಪ್ಪಿನಂಗಡಿ, ಜನವರಿ 19: ಮಧ್ಯಾಹ್ನ ಹೊತ್ತೇ ಪ್ರತ್ಯಕ್ಷಗೊಂಡ ಚಿರತೆಯೊಂದು ಮನೆಯ ವರಾಂಡದಲ್ಲಿದ್ದ ನಾಯಿ ಮರಿಯೊಂದನ್ನು ಹೊತ್ತೊಯ್ದ ಘಟನೆ ಬುಧವಾರ ತಣ್ಣೀರುಪಂಥ ಗ್ರಾಮದ ಅಳಕ್ಕೆ ಎಂಬಲ್ಲಿ ನಡೆದಿದೆ. ತಣ್ಣೀರುಪಂಥ ಗ್ರಾಮದ ಅಳಕ್ಕೆಎಂಬಲ್ಲಿ ಗಣೇಶ್ ಎಂಬವರ ಮನೆಯ ವರಾಂಡದಲ್ಲಿ ಕಾಣಿಸಿಕೊಂಡ ಚಿರತೆ ವರಾಂಡದಲ್ಲಿ ಮಲಗಿದ್ದ 40 ದಿನ ಪ್ರಾಯದ ಪಗ್ ಜಾತಿಯ ನಾಯಿ ಮರಿಯನ್ನು ಕಚ್ಚಿಕೊಂಡು ಹೊತ್ತೊಯ್ದಿದೆ. ಗಣೇಶ್ ಇವರ ಪತ್ನಿ ಕಣಿಯೂರು ಗ್ರಾಮ ಪಂಚಾಯತ್ನಲ್ಲಿ ಪಿಡಿಒ ಆಗಿದ್ದು, ಅವರು ಕಚೇರಿಗೆ ಹೋಗಿದ್ದರು. ಕಲ್ಲೇರಿಯಲ್ಲಿ ಅಂಗಡಿ ಹೊಂದಿದ್ದ ಗಣೇಶ್ ಅವರು ಈ ಸಂದರ್ಭ ಮನೆಯಲ್ಲಿ ಒಬ್ಬರೇ ಇದ್ದಾಗ ಈ ಘಟನೆ ಸಂಭವಿಸಿದೆ. ಚಿರತೆ ಬಂದು ನಾಯಿ ಮರಿಯನ್ನು ಹೊತ್ತೊಯ್ದ ಘಟನೆಯ ಬಗ್ಗೆ ಊರಿನಲ್ಲಿ ಸುದ್ದಿ ಹರಡುತ್ತಿದ್ದಂತೆ ಗ್ರಾಮದಲ್ಲಿರುವ ಚಿರತೆಯ ಬಗ್ಗೆ ಗ್ರಾಮಸ್ಥರಲ್ಲಿ ಆತಂಕ ಶುರುವಾಗಿದೆ. ಬಾರ್ಯ, ನೀಲಗಿರಿ ಪರಿಸರದಲ್ಲಿ ಸುಮಾರು 2 ತಿಂಗಳಿನಿಂದ ಚಿರತೆ ಅಲ್ಲಲ್ಲಿ ಕಾಣಿಸಿಕೊಂಡಿದ್ದು, ಈ ಬಗ್ಗೆ ಹಲವು ಬಾರಿ ಅರಣ್ಯ ಇಲಾಖೆ ಗಮನಕ್ಕೂ ತರಲಾಗಿದೆ.
ಕೊಲ್ಲಮೊಗ್ರ ಅಗಸ್ಟ್ 05: ಕರಾವಳಿಯಲ್ಲಿ ಸುರಿಯುತ್ತಿರುವ ಮಳೆ ಭಾರೀ ಅವಾಂತರವನ್ನೆ ಸೃಷ್ಠಿಸಿದೆ. ನೂರಾರು ಮನೆಗಳು ಜಲಾವೃತವಾಗಿದ್ದು, ಕೃಷಿ ಭೂಮಿಗಳು ಭೂಕುಸಿತಕ್ಕೆ ಸಂಪೂರ್ಣ ಹಾನಿಯಾಗಿವೆ. ಮಳೆ ಪ್ರವಾಹಕ್ಕೆ ಜನ ಜಾನುವಾರುಗಳು ಕೊಚ್ಚಿ ಹೋಗಿದೆ. ಅಗಸ್ಟ್ 1 ರಂದು...