Connect with us

    DAKSHINA KANNADA

    ಲೈಂಗಿಕ ದೌರ್ಜನ್ಯದ ವಿರುದ್ದ ಕಠಿಣ ಕ್ರಮ ಕೈಗೊಳ್ಳಿ: ಶಾಸಕ ಡಾ.ಭರತ್ ಶೆಟ್ಟಿ ವೈ

    ಮಂಗಳೂರು, ಅ.16: ಮಂಗಳೂರು ವಿ.ವಿ ಯಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು ಇದನ್ನು ಇಷ್ಟು ವರ್ಷಗಳ ಕಾಲ ಮುಚ್ಚಿಟ್ಟವರ ಮತ್ತು ಲೈಂಗಿಕ ದೌರ್ಜನ್ಯ ನಡೆಸಿದವರ
    ವಿರುದ್ದ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ ಎಂದು ಮಂಗಳೂರು ವಿ.ವಿ ಅಕಾಡೆಮಿಕ್ ಕೌನ್ಸಿಲ್
    ಸದಸ್ಯ ,ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಉಪಮುಖ್ಯಮಂತ್ರಿ ಡಾ.ಅಶ್ವಥನಾರಾಯಣ್ ಅವರನ್ನು ಒತ್ತಾಯಿಸಿದ್ದಾರೆ.
    ಮೂರು ವರ್ಷಗಳ ಹಿಂದೆ ಈ ಘಟನೆ ನಡೆದಿದೆ. ಗಂಭೀರವಾದ ಪ್ರಕರಣವನ್ನು ಮುಚ್ಚಿಡಲಾಗಿತ್ತು.
    ಮಹಿಳಾ ಆಯೋಗ ವರದಿ ಕೇಳಿದರೂ ಕೊಡಲು ಹಿಂದೇಟು ಹಾಕಿದ್ದಾರೆ. ಯಾಕಾಗಿ ತಪ್ಪಿತಸ್ಥರನ್ನು ರಕ್ಷಿಸಲಾಗಿತ್ತು.ಇದು ಶಿಕ್ಷಣ ಕ್ಷೇತ್ರ ಮತ್ತು ವಿದ್ಯಾರ್ಥಿ ವಲಯದಲ್ಲಿ ತಪ್ಪು ಸಂದೇಶ ರವಾನೆಯಾಗಿದೆ.

    ತಕ್ಷಣ ತಪ್ಪಿತಸ್ಥರನ್ನು ಅಮಾನತು ಮಾಡಿ ಕೇಸು ದಾಖಲಿಸಿ ತನಿಖೆ ನಡೆಸಿ ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿದ್ದಾರೆ. ವಿದ್ಯಾರ್ಥಿಗಳು ಲೈಂಗಿಕ ದೌರ್ಜನ್ಯ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ಇಂತಹ ದುರ್ಘಟನೆ ಕ್ಯಾಂಪಸ್ಗಳಲ್ಲಿ ನಡೆಯದಂತೆ ಪಾರದರ್ಶಕ ಕ್ರಮ ಕೈಗೊಳ್ಳ ಬೇಕು ಎಂದಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply