National
ತಮಿಳ್ನಾಡಿನಲ್ಲಿ ಲಕ್ಷ ದಾಟಿದ ಸೋಂಕಿತರು, ಚೆನ್ನೈ, ಮಧುರೈ ಇನ್ನೂ ಲಾಕ್ !!
ಚೆನ್ನೈ , ಜೂನ್ 4 : ದೇಶದಲ್ಲಿ ಕೊರೊನಾ ಮಹಾಮಾರಿಗೆ ನಲುಗಿ ಹೋಗಿರುವ ಎರಡನೇ ರಾಜ್ಯವಾಗಿರುವ ತಮಿಳ್ನಾಡಿನಲ್ಲಿ ಸೋಂಕಿತರ ಸಂಖ್ಯೆ ಒಂದು ಲಕ್ಷದ ಗಡಿ ದಾಟಿದೆ. ಶುಕ್ರವಾರ ಒಂದೇ ದಿನ 4329 ಹೊಸ ಪ್ರಕರಣಗಳು ಪಾಸಿಟಿವ್ ಆಗಿದ್ದು ರಾಜ್ಯದಲ್ಲಿ 1,02,721 ಸೋಂಕು ಪೀಡಿತರಿದ್ದಾರೆ.
ಶುಕ್ರವಾರ 64 ಮಂದಿ ಕೊರೊನಾಗೆ ಬಲಿಯಾಗಿದ್ದು ತಮಿಳ್ನಾಡಿನಲ್ಲಿ ಒಟ್ಟು 1385 ಮಂದಿ ಸಾವು ಕಂಡಿದ್ದಾರೆ. ಆಶಾದಾಯಕ ವಿಚಾರ ಅಂದರೆ ರಾಜ್ಯದಲ್ಲಿ ಈವರೆಗೆ 58,378 ಮಂದಿ ಕೊರೊನಾ ಮುಕ್ತರಾಗಿ ಹೊರಬಂದಿದ್ದಾರೆ. ಒಟ್ಟು ಪ್ರಕರಣಗಳಲ್ಲಿ 62 ರಷ್ಟು ಕೇಸು ಚೆನ್ನೈ ನಗರ ಒಂದರಲ್ಲೇ ವರದಿಯಾಗಿದ್ದು , ಶುಕ್ರವಾರ ಒಂದೇ ದಿನ 33 ಮಂದಿ ಇಲ್ಲಿ ಸಾವನ್ನಪ್ಪಿದ್ದಾರೆ.
ಸೋಂಕು ವ್ಯಾಪಕವಾಗಿ ಹರಡುತ್ತಿರುವ ಚೆನ್ನೈ ಮತ್ತು ಮಧುರೈನಲ್ಲಿ ಲಾಕ್ ಡೌನ್ ಮುಂದುವರಿದಿದ್ದು ಇತರೇ ಜಿಲ್ಲೆಗಳಿಂದ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಇದೇ ವೇಳೆ, ರಾಜ್ಯ ಸರಕಾರ ಅತಿ ವೇಗದ ತಪಾಸಣೆಗಾಗಿ ರಾಜ್ಯಾದ್ಯಂತ ಅಲ್ಲಲ್ಲಿ ಫೀವರ್ ಕ್ಲಿನಿಕ್ ಗಳನ್ನು ತೆರೆದಿದ್ದು ಈವರೆಗೆ 12 ಲಕ್ಷಕ್ಕಿಂತಲೂ ಹೆಚ್ಚು ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಹೀಗಿದ್ದರೂ ತಮಿಳ್ನಾಡು ಸರಕಾರ ಮಾತ್ರ ಸೋಂಕು ಸಮುದಾಯಕ್ಕೆ ಹರಡಿದೆ ಎನ್ನುವುದನ್ನು ಒಪ್ಪಿಕೊಳ್ತಿಲ್ಲ..
Facebook Comments
You may like
ಮಹಾರಾಷ್ಟ್ರದಲ್ಲಿ ಕರೊನಾ ಹಾವಳಿ : ಪೊಲೀಸರಿಗೆ ವರ್ಕ್ಫ್ರಮ್ ಹೋಮ್!
ಕೇರಳ ಮತ್ತು ಮುಂಬೈಯಿಂದ ಬರುವವರಿಗೆ ಆರ್.ಟಿ.ಪಿ.ಸಿ.ಆರ್ ಕಡ್ಡಾಯ : ಸಂಸದೆ ಶೋಭಾ
ಕೇರಳ ಗಡಿ ಭಾಗದಲ್ಲಿ ಮತ್ತೆ ಕೋವಿಡ್ ತಪಾಸಣೆ , ನೆಗೆಟಿವ್ ವರದಿ ಇದ್ದವರಿಗೆ ಮಾತ್ರ ಕರ್ನಾಟಕ ಪ್ರವೇಕ್ಕೆ ಅವಕಾಶ: ಕೇರಳಿಗರಿಂದ ಪ್ರತಿಭಟನೆ
ಕೇರಳದಿಂದ ಜಿಲ್ಲೆಗೆ ಆಗಮಿಸುವವರಿಗೆ ಫೆಬ್ರವರಿ 22 ರಿಂದ ಕೊರೊನಾ ನೆಗೆಟಿವ್ ಪ್ರಮಾಣ ಪತ್ರ ಕಡ್ಡಾಯ…!!
ಕೇರಳ ವಿಧ್ಯಾರ್ಥಿಗಳಿಗೆ ಕೊರೊನಾ ಟೆಸ್ಟ್ ಕಡ್ಡಾಯ – ಜಿಲ್ಲಾಧಿಕಾರಿ
ಐಎಲ್ಐ, ಸಾರಿ ವರದಿ ನಿರ್ವಹಿಸದ ಖಾಸಗಿ ಆಸ್ಪತ್ರೆಗಳ ಮಾನ್ಯತೆ ರದ್ದು- ಜಿಲ್ಲಾಧಿಕಾರಿ ಜಿ. ಜಗದೀಶ್
You must be logged in to post a comment Login