Connect with us

    LATEST NEWS

    ವಿಧ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ – ಸ್ಕೂಲ್ ಬಸ್, ಪೊಲೀಸ್ ವಾಹನಗಳಿಗೆ ಬೆಂಕಿ

    ತಮಿಳುನಾಡು ಜುಲೈ 17: ಕಲ್ಲಕುರಿಚಿಯ ಖಾಸಗಿ ಶಾಲೆಯೊಂದರಲ್ಲಿ 12 ತರಗತಿ ವಿಧ್ಯಾರ್ಥಿನಿ ಸಾವಿಗೆ ನ್ಯಾಯ ಒದಗಿಸಬೇಕೆಂದು ನಡೆಯುತ್ತಿದ್ದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು, ಪ್ರತಿಭಟನಾಕಾರರು ಶಾಲೆಯ ಬಸ್ ಹಾಗೂ ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


    ಜುಲೈ 13 ರಂದು ಮುಂಜಾನೆ ಕಡಲೂರು ಜಿಲ್ಲೆಯ ಪೆರಿಯನೆಸಲೂರು ಗ್ರಾಮದ 17 ವರ್ಷದ ಶ್ರೀಮತಿ ಎಂಬ ವಿದ್ಯಾರ್ಥಿನಿ ಕಲ್ಲಕುರಿಚಿ ಜಿಲ್ಲೆಯ ಚಿನ್ನಸೇಲಂ ಬಳಿಯ ಕಣಿಯಮೂರ್‌ನಲ್ಲಿರುವ ಶಾಲೆಯ ಹಾಸ್ಟೆಲ್ ಆವರಣದಲ್ಲಿ ಶವವಾಗಿ ಪತ್ತೆಯಾಗಿದ್ದರು.
    ಹಾಸ್ಟೆಲ್‌ನ ಮೂರನೇ ಮಹಡಿಯ ಕೊಠಡಿಯೊಂದರಲ್ಲಿ ವಾಸವಾಗಿದ್ದ ವಿದ್ಯಾರ್ಥಿನಿ ಮೇಲಿನ ಮಹಡಿಯಿಂದ ನೆಲಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಶಂಕಿಸಲಾಗಿದೆ.

    ಅಂದಿನಿಂದ ಶ್ರೀಮತಿ ಅವರ ಕುಟುಂಬ ಸದಸ್ಯರು ಮತ್ತು ಅವರ ಗ್ರಾಮದ ಜನರು ಕಲ್ಲಾಕುರಿಚಿಯ ಶಾಲೆ ಮತ್ತು ಸರ್ಕಾರಿ ಆಸ್ಪತ್ರೆಯ ಮುಂದೆ ನಿರಂತರವಾಗಿ ಪ್ರತಿಭಟನೆಯಲ್ಲಿ ತೊಡಗಿದ್ದಾರೆ. ಶ್ರೀಮತಿ ಸಾವಿಗೆ ಕಾರಣರಾದವರನ್ನು ಬಂಧಿಸುವಂತೆ ಆಗ್ರಹಿಸಿ ಆಕೆಯ ಕುಟುಂಬಸ್ಥರು ಪ್ರತಿಭಟನೆ ನಡೆಸಿ ಶವವನ್ನು ತೆಗೆದುಕೊಳ್ಳಲು ನಿರಾಕರಿಸಿದ್ದರಿಂದ ಶವ ಪರೀಕ್ಷೆ ಮುಗಿದರೂ ವಿದ್ಯಾರ್ಥಿನಿ ಶವ ಆಸ್ಪತ್ರೆಯಲ್ಲಿದೆ.

    ಈ ನಡುವೆ ಪ್ರತಿಭಟನೆಗೆ ವಿವಿಧ ಸಂಘಟನೆಗಳು ಸಾಥ್ ನೀಡಿದ ಬೆನ್ನಲ್ಲೆ ಪ್ರತಿಭಟನಾ ಕಾವು  ಜೋರಾಗಿದೆ. ಈ ನಡುವೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಸುಮಾರು 13ಕ್ಕೂ ಅಧಿಕ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಪರಿಸ್ಥಿತಿಯನ್ನು ತಿಳಿಗೊಳಿಸಲು ಕಲ್ಲಕುರಿಚಿ ಜಿಲ್ಲಾ ಪೊಲೀಸರು ಲಾಠಿಪ್ರಹಾರ ಮಾಡಿದರು. ಆಶ್ರುವಾಯು ಸಿಡಿಸಿದರು. ಆಗ ಪ್ರತಿಭಟನಾಕಾರರು ಪೊಲೀಸ್ ಸಿಬ್ಬಂದಿ ಮೇಲೆ ಕಲ್ಲು ತೂರಾಟ ನಡೆಸಿದರು. ಘಟನೆಯಲ್ಲಿ ಡಿಐಜಿ ಎಂ ಪಾಂಡಿಯಾನ್ ಸೇರಿದಂತೆ 20ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply