Connect with us

    KARNATAKA

    ವಾಟ್ಸ್​ಆ್ಯಪ್​ ಮೂಲಕ ಬಿಜೆಪಿಗೆ BJP ಗೆ ಟಾಟಾ ಬೈ ಬೈ, ಕಾಂಗ್ರೆಸ್ ಸೇರಿದ ಸಿ.ಪಿ. ಯೋಗೇಶ್ವರ್​..!

    ಬೆಂಗಳೂರು : ವಾಟ್ಸ್​ಆ್ಯಪ್​ ಮೂಲಕ ಬಿಜೆಪಿಗೆ BJP ಗೆ ಟಾಟಾ ಬೈ ಬೈ ಮಾಡಿ ಕಾಂಗ್ರೆಸ್ ಸೇರಿದ ಸಿ.ಪಿ. ಯೋಗೇಶ್ವರ್​  ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಖಚಿತವಾಗಿದೆ.

    ಇಂದು  ಬೆಳಗ್ಗೆಯೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ನಿವಾಸದಲ್ಲಿ ಕಾಣಿಕೊಂಡು ಅಚ್ಚರಿ ಮೂಡಿಸಿದ ಸಿಪಿವೈ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಅದಕ್ಕೂ ಮುನ್ನವೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯಂದ್ರ ಅವರಿಗೆ ವಾಟ್ಸ್​ಆ್ಯಪ್​ ಮೂಲಕ ಸಿ.ಪಿ. ಯೋಗೇಶ್ವರ್​ ಅವರು ರಾಜೀನಾಮೆ ಸಂದೇಶ ರವಾನೆ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸದಲ್ಲಿ ಭೇಟಿಯಾಗಿ ಕೆಲಕಾಲ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಡಿಸಿಎಂ ಡಿಕೆಶಿ, ಮಾಜಿ ಸಂಸದ ಡಿ.ಕೆ. ಸುರೇಶ್​, ಮದ್ದೂರು ಶಾಸಕ ಉದಯ್ ಗೌಡ, ಸಚಿವ ಜಮೀರ್​ ಅಹ್ಮದ್​, ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಹಾಗೂ ಸಚಿವ ಶಿವರಾಜ್​ ತಂಗಡಗಿ ಇದ್ದರು. ಡಿಎಸ್​ ಚಿಹ್ನೆ ಅಡಿಯಲ್ಲಿ ಸ್ಪರ್ಧೆ ಮಾಡುವಂತೆ ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್​.ಡಿ. ಕುಮಾರಸ್ವಾಮಿ ಅವರು ನೀಡಿದ್ದ ಆಫರ್​ ಅನ್ನು ಸಿಪಿವೈ ತಿರಸ್ಕರಿಸಿದ್ದರು. ಬಿಜೆಪಿಯಿಂದ ಕಣಕ್ಕಿಳಿಯುವ ಆಸೆಯನ್ನು ವ್ಯಕ್ತಪಡಿಸಿದ್ದರು. ಆದರೆ, ಬಿಜೆಪಿ ನಾಯಕರು ಸರಿಯಾಗಿ ಸ್ಪಂದಿಸಲಿಲ್ಲ ಎಂದು ಸ್ವತಃ  ಯೋಗಿಶ್ವರ್ ಆರೋಪ ಮಾಡಿದ್ದಾರೆ. ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದ್ದರು. ಆದರೆ, ಬಿಜೆಪಿ ನಾಯಕರಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಯೋಗೇಶ್ವರ್​ ಅವರು ಕೊನೆಗೂ ಕಾಂಗ್ರೆಸ್​ ಬಾಗಿಲನ್ನು ಬಡಿದಿದ್ದಾರೆ. ಇಂದು ಸಂಜೆ ಅಥವಾ ನಾಳೆ ಕಾಂಗ್ರೆಸ್​ ಅಭ್ಯರ್ಥಿ ಪಟ್ಟಿ ಬಿಡುಗಡೆಯಾಗಲಿದೆ.

    Share Information
    Advertisement
    Click to comment

    You must be logged in to post a comment Login

    Leave a Reply