LATEST NEWS
ಮಂಗಳೂರು : ಪೋಷಕರ ಸಭೆಯಲ್ಲಿ ವ್ಯಕ್ತಿಯಿಂದ ಶಿಕ್ಷಕಿಗೆ ಹಲ್ಲೆ
ಮಂಗಳೂರು ನವೆಂಬರ್ 06: ಶಾಲಾ ಪೋಷಕರ ಸಭೆ ನಡೆಯುತ್ತಿದ್ದ ಸಂದರ್ಭ ವ್ಯಕ್ತಿಯೊಬ್ಬ ಶಿಕ್ಷಕಿ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದ್ದು, ಹಲ್ಲೆಯಿಂದ ಗಾಯಗೊಂಡಿದ್ದ ಶಿಕ್ಷಕಿ ಸ್ಥಳೀ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಾಟಿಪಳ್ಳ ನಾರಾಯಣಗುರು ಶಾಲೆಯ ಬಳಿ ನಿವಾಸಿ ಚಂದ್ರಕಲಾ ಹಲ್ಲೆಗೊಳಗಾದವರು. ಮುಹಮ್ಮದ್ ಹನೀಫ್ ಹಲ್ಲೆ ನಡೆಸಿದ ಆರೋಪಿ. ಸುರತ್ಕಲ್ ಠಾಣೆಯ ಪಿಎಸ್ಐ ಪುನೀತ್ ಗಾಂವ್ಕರ್ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿ ವಿರುದ್ಧ ಮಹಿಳಾ ದೌರ್ಜನ್ಯ, ಹಲ್ಲೆ ಪ್ರಕರಣ ದಾಖಲಾಗಿದೆ.
ಪರಿಚಯದ ನೆಲೆಯಲ್ಲಿ ಹನೀಫ್ ಪತ್ನಿಗೆ ಚಂದ್ರಕಲಾ ಅವರು ಸಾಲ ನೀಡಿದ್ದರು. ಆ ಮಹಿಳೆ ಸಾಲವನ್ನು ಹಿಂತಿರುಗಿಸಿರಲಿಲ್ಲ. ಹಣದ ಅವಶ್ಯಕತೆ ಇದ್ದು, ಸಾಲವನ್ನು ಹಿಂತಿರುಗಿಸುವಂತೆ ಚಂದ್ರಕಲಾ ಕೇಳಿದ್ದರು. ವಿದೇಶದಲ್ಲಿ ಕೆಲಸ ಮಾಡುತ್ತಿದ್ದ ಹನೀಫ್ ಎರಡು ದಿನಗಳ ಹಿಂದಷ್ಟೇ ಊರಿಗೆ ಮರಳಿದ್ದ. ಶಾಲೆಯಲ್ಲಿ ಪೋಷಕರ ಸಭೆಯ ಸಂದರ್ಭದಲ್ಲಿ ಚಂದ್ರಕಲಾ ಮತ್ತು ಹನೀಫ್ ಪತ್ನಿಯ ಮಧ್ಯೆ ಜಗಳ ನಡೆದಿದೆ. ಮಾತಿನ ಭರದಲ್ಲಿ ಶಿಕ್ಷಕಿಯು ತನ್ನ ಮಗುವಿನ ವಿಚಾರ ಪ್ರಸ್ತಾಪಿಸಿದ್ದಾರೆ ಎಂದು ಸಿಟ್ಟಾದ ಹನೀಫ್ ಏಕಾಏಕಿ ಹಲ್ಲೆ ನಡೆಸಿದ್ದಾನೆ. ಶಿಕ್ಷಕಿಯ ಬಲಗೈಗೆ ಬಲವಾದ ಪೆಟ್ಟು ಬಿದ್ದಿದೆ‘ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
You must be logged in to post a comment Login