KARNATAKA
VIDEO: ಮುಖ್ಯ ಶಿಕ್ಷಕನಿಗೆ ಹಿಗ್ಗಾಮುಗ್ಗ ಥಳಿಸಿದ ವಿಧ್ಯಾರ್ಥಿನಿಯರು…!!
ಮಂಡ್ಯ ಡಿಸೆಂಬರ್ 15: ಸಕ್ಕರೆ ನಾಡು ಮಂಡ್ಯದಲ್ಲಿ ವಿದ್ಯಾರ್ಥಿನಿಯರು ಪಾಠ ಕಲಿಸುವ ಶಿಕ್ಷಕನ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಹಾಸ್ಟೆಲ್ ವಿದ್ಯಾರ್ಥಿನಿಯರ ಜತೆ ಅಸಭ್ಯ ವರ್ತನೆ ತೋರಿದ ಹಿನ್ನೆಲೆ ವಿದ್ಯಾರ್ಥಿನಿಯರು ಗುಂಪಾಗಿ ಕಾಮುಕ, ಮುಖ್ಯ ಶಿಕ್ಷಕನಿಗೆ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ. ಎಣ್ಣೆ ಏಟಲ್ಲಿ ರಾತ್ರಿ ವಿದ್ಯಾರ್ಥಿನಿಯರ ಜತೆ ಶಿಕ್ಷಕ ಆನಂದ ಚಿನ್ಮಯ ಮೂರ್ತಿ ಅಸಭ್ಯವರ್ತನೆ ತೋರಿದ್ದ. ಇದರಿಂದ ತಕ್ಷಣವೇ ಎಚ್ಚೆತ್ತ ವಿದ್ಯಾರ್ಥಿನಿಯರು ಶಿಕ್ಷಕನ ಮೇಲೆ ಹಲ್ಲೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದ ವಿಡಿಯೋ ಇದೀಗ ವೈರಲ್ ಆಗಿದೆ.
ಹೆಡ್ ಮಾಸ್ಟರ್ ಚಿನ್ಮಯಾನಂದ ಮೂರ್ತಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ಹೆಡ್ ಮಾಸ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಚಿನ್ಮಾಯಾನಂದ ಮೂರ್ತಿ ವಿದ್ಯಾರ್ಥಿನಿಯರಿಗೆ ತನ್ನ ಕಚೇರಿಗೆ ಕರೆಸಿಕೊಂಡು ದೌರ್ಜನ್ಯ ಎಸಗುತ್ತಿದ್ದನಂತೆ. ಮುಖ್ಯ ಶಿಕ್ಷಕನ ಕಾಟ ತಾಳಲಾರದೆ ರಾತ್ರಿ ವಿದ್ಯಾರ್ಥಿನಿಯರು ಕೈಯಲ್ಲಿ ಕೋಲು ಹಾಗೂ ದೊಣ್ಣೆ ಹಿಡಿದು ಮನಸೋಯಿಚ್ಚೆ ಥಳಿಸಿದ್ದಾರೆ. ವಿದ್ಯಾರ್ಥಿನಿಯರು ಕೊಟ್ಟ ಏಟಿಗೆ ಶಿಕ್ಷಕ ತಬ್ಬಿಬ್ಬಾಗಿದ್ದಾನೆ. ಸದ್ಯ ಕಾಮುಕ ಶಿಕ್ಷಕನ ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.
You must be logged in to post a comment Login