KARNATAKA
ನಾಳೆಯಿಂದ ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ಸೇವೆ ಆರಂಭ!
ಉಡುಪಿ: ನಾಳೆಯಿಂದ ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ಸೇವೆ ಆರಂಭಗೊಳ್ಳಲಿದ್ದು, ಅನ್ನ ದಾಸೋಹ ಮತ್ತು ಸಮಾರಂಭಗಳಿಗೆ ಅವಕಾಶವಿಲ್ಲ. ಸೇವೆ ಆರಂಭಿಸಲು ಅನುಮತಿ ಕೋರಿ ಆರೋಗ್ಯ ಇಲಾಖೆಯನ್ನು ಸಂಪರ್ಕಿಸಿದ್ದೇವೆ . ಸೆಪ್ಟಂಬರ್ 1ರಿಂದ ಸೇವೆ ಆರಂಭ ಮಾಡಬೇಕು ಎಂಬುದು ನಮ್ಮ ಗುರಿಯಾಗಿದೆ. ರಾಜ್ಯ ಮುಖ್ಯ ಕಾರ್ಯದರ್ಶಿ ಜೊತೆ ಮಾತನಾಡಿದ್ದೇವೆ ಒಳಾಂಗಣದ ಎಲ್ಲಾ ಸೇವೆ ಆರಂಭ ಮಾಡಿ ಎಂದು ಮನವಿ ಮಾಡಿದ್ದೇವೆ.ಸರ್ಕಾರದಿಂದ ಅಧಿಕೃತ ಮಾಹಿತಿ ಮತ್ತು ಅನುಮತಿ ಎರಡು ದಿನದಲ್ಲಿ ಬರಬಹುದು.
ಸಾಮಾಜಿಕ ಅಂತರ ಕಾಪಡಿಕೊಂಡು ಸೇವೆಗೆ ಮುಕ್ತ ಅವಕಾಶ ನೀಡಲಾಗುವುದು. ಚಿನ್ನದ ರಥ ಸೇವೆ ಬೆಳ್ಳಿರಥ ಸೇವೆ ಹೇಗೆ ಎಂಬ ಬಗ್ಗೆ ಚಿಂತನೆ ನಡೆಸುತ್ತೇವೆ, ಕೋವಿಡ್-19 ಗೈಡ್ ಲೈನ್ ಮೇಲೆ ನಮ್ಮ ಸೇವೆ ಆರಂಭವಾಗುತ್ತದೆ. ನೂರಾರು ಸಾವಿರಾರು ಜನ ಸೇರಿ ಕೊಡುವ ಸೇವೆ ಸಾಧ್ಯವಿಲ್ಲ.
ಹತ್ತು-ಹದಿನೈದು ಜನರು ಅಂತಹ ಧಾರ್ಮಿಕ ಸೇವೆ ನಡೆಸುವ ಚಿಂತನೆ ನಡೆಸುತ್ತೇವೆ
ಕೋವಿಡ್ ನಿಯಮದ ಮಿತಿಯ ಒಳಗೆ ಎಲ್ಲಾ ಸೇವೆಗಳು ಇರುತ್ತದೆ ಎಂದು ಉಡುಪಿಯಲ್ಲಿ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ
You must be logged in to post a comment Login