LATEST NEWS
ಕೇರಳ ಕಣ್ಣೂರು ಹೆದ್ದಾರಿಯಲ್ಲಿ ಕಾರು-ಲಾರಿ ಮಧ್ಯೆ ಭೀಕರ ಅಪಘಾತ, ಮಗು ಸೇರಿ ಒಂದೇ ಕುಟುಂಬದ ಐವರು ಮೃತ್ಯು..!
ಕಣ್ಣೂರು : ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ಒಂದೇ ಕುಟುಂಬದ ಐವರು ಮೃತಪಟ್ಟ ಘಟನೆ ಕೇರಳದ ಕಣ್ಣೂರಿನಲ್ಲಿ ಸೋಮವಾರ ರಾತ್ರಿ ನಡೆದಿದೆ.
ಕಾಲಿಚನಡುಕ್ಕಂ ನಿವಾಸಿ ಕೆ.ಎನ್.ಪದ್ಮಕುಮಾರ್ (59), ಭೀಮಾನದಿ ನಿವಾಸಿ ಚೂರಿಕ್ಕಟ್ ಸುಧಾಕರನ್ (52), ಅಜಿತಾ (35), ಕೊಜುಮ್ಮಲ್ ಕೃಷ್ಣನ್ (65), ಆಕಾಶ್ (9 ) ಮೃತರು. ಪೊಲೀಸರ ಪ್ರಕಾರ, ಸೋಮವಾರ ರಾತ್ರಿ 10.15 ರ ಸುಮಾರಿಗೆ ಕಣ್ಣೂರಿನ ಕನ್ನಪುರಂ ಪ್ರದೇಶದಲ್ಲಿ ಇವರ ಕುಟುಂಬ ತಲಶ್ಶೇರಿಯಿಂದ ಕಾಸರಗೋಡಿಗೆ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿದೆ. ಗ್ಯಾಸ್ ಸಿಲಿಂಡರ್ ಹೊತ್ತ ಲಾರಿ ಕರ್ನಾಟಕದ ಮಂಗಳೂರಿನಿಂದ ಬರುತ್ತಿದ್ದ ಸಂದರ್ಭದಲ್ಲಿ ಮುಖಾಮುಖಿ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಂಬತ್ತು ವರ್ಷದ ಬಾಲಕ ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಲಾರಿ ಚಾಲಕನಿಗೂ ಗಾಯಗಳಾಗಿವೆ ಎಂದು ತಿಳಿಸಿದ್ದಾರೆ. ಸುಧಾಕರನ್ ಮತ್ತು ಕುಟುಂಬದ ಇತರ ಸದಸ್ಯರು ಸಿಎ ವ್ಯಾಸಂಗ ಮಾಡುತ್ತಿರುವ ತನ್ನ ಮಗ ಸೌರವ್ನನ್ನು ಕೋಯಿಕ್ಕೋಡ್ನ ಹಾಸ್ಟೆಲ್ಗೆ ಬಿಟ್ಟು ಮನೆಗೆ ಮರಳುತ್ತಿದ್ದರು. ಅಗ್ನಿಶಾಮಕ ದಳದ ಅಧಿಕಾರಿಗಳು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತನನ್ನು ಕಾರಿನಿಂದ ಹೊರತೆಗೆದರು. ಮೋಟಾರು ವಾಹನ ಇಲಾಖೆ ಅಧಿಕಾರಿಗಳು ಕೂಡ ಸ್ಥಳಕ್ಕೆ ಆಗಮಿಸಿದ್ದರಯು. ಪೊಲೀಸರು ಲಾರಿ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
You must be logged in to post a comment Login