LATEST NEWS
ಉಗ್ರರ ಬೆದರಿಕೆ ಬೆನ್ನಲ್ಲೇ – ದೇವಸ್ಥಾನಗಳಿಗೆ ಪೊಲೀಸ್ ಭದ್ರತೆ
ಮಂಗಳೂರು ನವೆಂಬರ್ 27: ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟದ ಬಳಿಕ ಉಗ್ರಗಾಮಿಗಳು ಕರಾವಳಿಯ ದೇವಸ್ಥಾನಗಳನ್ನು ಗುರಿಯಾಗಿಸಿಕೊಂಡಿದ್ದಾರೆ ಎಂಬ ಸಂದೇಶಗಳು ಮಾಧ್ಯಮಗಳು ಹರಿದಾಡುತ್ತಿದ್ದು, ಈ ಹಿನ್ನಲೆ ಪೊಲೀಸ್ ಇಲಾಖೆ ಜಿಲ್ಲೆಯ ಪ್ರಮುಖ ದೇವಸ್ಥಾನಗಳಿಗೆ ಪೊಲೀಸ್ ಭದ್ರತೆ ಒದಗಿಸಿದೆ.
ಈ ಮೊದಲು ದೇವಸ್ಥಾನಕ್ಕೆ ಪೊಲೀಸ್ ಭದ್ರತೆಗಾಗಿ ಕದ್ರಿ ಮಂಜುನಾಥ ದೇವಾಲಯ ಆಡಳಿತ ಮಂಡಳಿಯವರು ಮನವಿ ಮಾಡಿದ್ದರು, ಈ ಹಿನ್ನಲೆ ಜಿಲ್ಲೆಯ ಪ್ರಮುಖ ದೇವಾಲಯಗಳಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ದೇವಸ್ಥಾನದ ಆಸುಪಾಸಿನಲ್ಲಿ ಅಳವಡಿಸಿರುವ ಸಿ.ಸಿ.ಟಿ.ವಿ ಕ್ಯಾಮೆರಾ ಕಣ್ಗಾವಲು ವ್ಯವಸ್ಥೆಯನ್ನು ಬಲಪಡಿಸಲಾಗಿದೆ. ಸಿ.ಸಿ.ಟಿ.ವಿ ಕ್ಯಾಮೆರಾಗಳಲ್ಲಿ ದಾಖಲಾಗುವ ದೃಶ್ಯಗಳ ಬಗ್ಗೆಯೂ ವಿಶೇಷ ನಿಗಾ ಇಡಲಾಗುತ್ತಿದೆ. ಸಶಸ್ತ್ರ ಮೀಸಲು ಪಡೆಯ ವಾಹನಗಳೂ ದೇವಸ್ಥಾನದ ಬಳಿ ಬೀಡುಬಿಟ್ಟಿವೆ.
You must be logged in to post a comment Login