Connect with us

    LATEST NEWS

    ಉಗ್ರಸಂಘಟನೆ ಪರ ಗೊಡೆ ಬರಹ ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ….!!

    ಮಂಗಳೂರು ಡಿಸೆಂಬರ್ 5: ಮಂಗಳೂರು ನಗರದ ಅಪಾರ್ಟ್ ಮೆಂಟ್ ಗೊಡೆ ಒಂದರಲ್ಲಿ ಉಗ್ರ ಸಂಘಟನೆಪರ ಗೊಡೆ ಬರಹ ಬರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.


    ಗುರುವಾರ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಫುಡ್ ಡೆಲಿವರಿ ಮಾಡುತ್ತಿದ್ದ ಮಾಝ್ ಅಹ್ಮದ್ (21) ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದರು. ಆತ ನೀಡಿದ ಮಾಹಿತಿ ಹಿನ್ನೆಲೆಯಲ್ಲಿ ಇನ್ನಿಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಮೂಲಕ ಒಟ್ಟು ಮೂವರನ್ನು ವಶಕ್ಕೆ ಪಡೆದಂತಾಗಿದೆ.


    ನವೆಂಬರ್ 27ರಂದು ಸರ್ಕ್ಯೂಟ್ ಹೌಸ್‌ನಿಂದ ಬಿಜೈ ಕಡೆಗೆ ಹೋಗುವ ರಸ್ತೆಯಲ್ಲಿ ಕದ್ರಿ ಕಂಬಳ ಕ್ರಾಸ್‌ನಲ್ಲಿರುವ ಅಪಾರ್ಟ್‌ಮೆಂಟ್ ವೊಂದರ ಆವರಣ ಗೋಡೆಯಲ್ಲಿ ಹಾಗೂ 29ರಂದು ಮಂಗಳೂರು ನ್ಯಾಯಾಲಯ ಆವರಣದಲ್ಲಿರುವ ಪೊಲೀಸ್ ಹೊರ ಠಾಣೆಯ ಹಳೇ ಕಟ್ಟಡದ ಗೋಡೆಯಲ್ಲಿ ಉರ್ದು ಭಾಷೆಯಲ್ಲಿ ದೇಶದ್ರೋಹಿ ಬರಹ ಕಾಣಿಸಿಕೊಂಡಿತ್ತು. ಎರಡು ಪ್ರಕರಣಗಳಿಗೆ ಸಂಬಂಧಿಸಿ ಕದ್ರಿ ಹಾಗೂ ಬಂದರು ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು. ನಾಲ್ಕು ವಿಶೇಷ ಪೊಲೀಸ್ ತಂಡಗಳು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಿವೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಆರೋಪಿಗಳ ವಿಚಾರಣೆ ನಡೆಯುತ್ತಿದೆ.

    Share Information
    Advertisement
    Click to comment

    You must be logged in to post a comment Login

    Leave a Reply