Connect with us

LATEST NEWS

ಬಸ್ ಮತ್ತು ಜೀಪ್ ನಡುವೆ ಮುಖಾಮುಖಿ ಡಿಕ್ಕಿ ಒರ್ವ ಸಾವು

Share Information

ಸುಳ್ಯ ಸೆಪ್ಟೆಂಬರ್ 14: ಬಸ್ ಮತ್ತು ಜೀಪ್ ನಡುವೆ ಮುಖಾಮುಖಿ ಡಿಕ್ಕಿ ನಡೆದು ಓರ್ವ ಸಾವನ್ನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಸುಳ್ಯದಲ್ಲಿ ನಡೆದಿದೆ.
ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ಸಮೀಪದ ಗುತ್ತಿಗಾರಿನ ತಾಳೂರು ಎಂಬಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಹಳೆ ಮಜಲು ನಿವಾಸಿ ಶಶಿ ಎಂಬುವರು ಮೃತಪಟ್ಟಿದ್ದು ಇನ್ನುಳಿದ ಮೂರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಘಟನೆಯಲ್ಲಿ ಪಿಕಪ್ ಜೀಪ್ ಸಂಪೂರ್ಣ ನಜ್ಜುಗಜ್ಜಾಗಿದ್ದು ಘಟನೆಯ ಭೀಕರತೆಯನ್ನು ವಿವರಿಸುತ್ತಿದೆ. ಸುಬ್ರಹ್ಮಣ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.


Share Information
Advertisement
Click to comment

You must be logged in to post a comment Login

Leave a Reply