Connect with us

    LATEST NEWS

    ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧಿತ ವ್ಯಕ್ತಿ ನನ್ನ ಪರಿಚಯದ ಹಿಂದೂ ಸಂಘಟನೆ ಕಾರ್ಯಕರ್ತ

    ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧಿತ ವ್ಯಕ್ತಿ ನನ್ನ ಪರಿಚಯದ ಹಿಂದೂ ಸಂಘಟನೆ ಕಾರ್ಯಕರ್ತ

    ಉಡುಪಿ ಫೆಬ್ರವರಿ 25: ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಇತ್ತೀಚೆಗೆ ಬಂಧಿತರಾಗಿರುವರನ್ನು ಗೌರಿ ಹಂತಕರೆನ್ನುವುದು ಸುಳ್ಳು ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.

    ಇದು ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣದಲ್ಲಿ ಸರಕಾರದ ವೈಫಲ್ಯವನ್ನು ತೋರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು ಗೌರಿ, ಕಲ್ಬುರ್ಗಿ ಹಂತಕರನ್ನು ಇದುವರೆಗೂ ಹಿಡಿಯಲು ರಾಜ್ಯ ಸರಕಾರಕ್ಕೆ ಸಾಧ್ಯವಾಗಿಲ್ಲ ಎಂದು ಹೇಳಿದರು.

    ಯಾರನ್ನೋ ಹಿಡಿದು ಗೌರಿ ಹಂತಕರೆಂದು ಬಿಂಬಿಸಲಾಗುತ್ತಿದೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ.

    ಬಂಧಿತನು ನನ್ನ ಪರಿಚಯದ ಹಿಂದೂ ಸಂಘಟನೆ ಕಾರ್ಯಕರ್ತ.ಆತ ಕೊಲೆ ಮಾಡುವಂತಹ ಹುಡುಗನಲ್ಲ ಎಂದು ಹೇಳಿದ ಅವರು ಆತನಲ್ಲಿ ಪಿಸ್ತೂಲು ಸಿಕ್ಕಿದ ಮಾತ್ರಕ್ಕೆ ಆತ ಕೊಲೆ ಮಾಡಿರಲು ಸಾಧ್ಯವಿಲ್ಲ. ರಾಜ್ಯ ಸರಕಾರ ತನ್ನ ವೈಫಲ್ಯ ಮರೆಮಾಚಲು ಈ ರೀತಿ ವರ್ತಿಸುತ್ತಿದೆ ಎಂದು ಅವರು ಅಭಿಪ್ರಾಯ ಪಟ್ಟರು.

    Share Information
    Advertisement
    Click to comment

    You must be logged in to post a comment Login

    Leave a Reply