Connect with us

    BELTHANGADI

    ಬ್ರೇಕ್ ಫೇಲ್ ಆಗಿ ಅರಣ್ಯಕ್ಕೆ ನುಗ್ಗಿದ ಅಯ್ಯಪ್ಪ ಮಾಲಾಧಾರಿಗಳಿದ್ದ ಬಸ್ ; ಹಲವರಿಗೆ ಗಾಯ

    ಬೆಳ್ತಂಗಡಿ, ಡಿಸೆಂಬರ್ 23: ಬಳ್ಳಾರಿಯಿಂದ ಶಬರಿಮಲೆಗೆ ಹೊರಟ ಮಿನಿ ಬಸ್ ಮುಂಡಾಜೆಯ ಉಳ್ಳಾಲ್ತಿ ಕಟ್ಟೆ ಎಂಬಲ್ಲಿ ಬ್ರೇಕ್ ಫೇಲ್ ಆಗಿ ಬಸ್ ರಸ್ತೆ ಬದಿಯ ಅರಣ್ಯಕ್ಕೆ ನುಗ್ಗಿದ ಪರಿಣಾಮ ಹಲವರಿಗೆ ಗಂಭೀರ ಗಾಯವಾದ ಘಟನೆ ಡಿ. 23ರ ಬೆಳ್ಳಿಗ್ಗೆ ಸಂಭವಿಸಿದೆ.

    ಕೂಡ್ಲಗಿ ತಾಲೂಕಿನ ಚಿಕ್ಕಜೋಗೆ ಹಳ್ಳಿಯ ಶಶಿ, ಜಲಧರ, ರಘು, ಬಸವರಾಜ್, ಲೋಕ ಎಂಬವರು ಗಾಯಗೊಂಡಿದ್ದು, ಇಬ್ಬರಿಗೆ ಗಂಭೀರ ಗಾಯವಾಗಿದೆ ಎನ್ನಲಾಗಿದೆ.

    ವಾಹನ ನುಗ್ಗಿದ ಸ್ಥಳದಲ್ಲಿ ಕಂದಕ ಹಾಗೂ ವಿದ್ಯುತ್ ಕಂಬವಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ದೊಡ್ಡ ಅಪಘಾತ ತಪ್ಪಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣೆ ಪೊಲೀಸರು ತೆರಳಲಿದ್ದು, ಒಟ್ಟು 6 ಆಂಬ್ಯುಲೆನ್ಸ್ ನಲ್ಲಿ ಪ್ರಯಾಣಿಕರನ್ನು ತಾಲೂಕಿನ ವಿವಿಧ ಆಸ್ಪತ್ರೆಗೆ ಸಾಗಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply