Connect with us

    KARNATAKA

    ಭಾರಿ ಮಳೆಗೆ ಹೆಚ್ಚುತ್ತಿದೆ ಅಪಾಯ , ಚಿಕ್ಕಮಗಳೂರು ಪ್ರವಾಸ ಮುಂದೂಡಲು ಜಿಲ್ಲಾಧಿಕಾರಿ ಮನವಿ..!

    ಚಿಕ್ಕಮಗಳೂರು:  ಧಾರಾಕಾರ ಮಳೆ‌ಯಾಗುತ್ತಿರುವ ಕಾರಣ ಇದು ಪ್ರವಾಸಿಗರಿಗೆ ಆಪತ್ತು ತರುವ ಸಾಧ್ಯತೆಗಳಿರುವ ಕಾರಣ  ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಪ್ರವಾಸ ಮುಂದೂಡುವಂತೆ ಚಿಕ್ಕಮಗಳೂರು ಜಿಲ್ಲಾಡಳಿತ ಪ್ರವಾಸಿಗರಿಗೆ ಮನವಿ ಮಾಡಿದೆ.


    ಈಗಾಗಲೇ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ನದಿ ತೊರೆಗಳು ತುಂಬಿ ಹರಿಯುತ್ತಿವೆ. ಶೃಂಗೇರಿ, ಕೆರೆಕಟ್ಟೆ, ನೆಮ್ಮಾರು, ಕುದುರೆಮುಖ, ಕಳಸ, ಮೂಡಿಗೆರೆ, ಚಾರ್ಮಾಡಿ ಘಟ್ಟಗಳ ಸಾಲಿನಲ್ಲಿ ಭಾರೀ ಮಳೆಯಾಗುತ್ತಿದ್ದು, ತುಂಗಾ, ಭದ್ರಾ, ಹೇಮಾವತಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಆದ್ದರಿಂದ ನದಿ‌‌‌ ತೀರ, ತಗ್ಗುಪ್ರದೇಶ ಸೇರಿದಂತೆ ಅಪಾಯಕಾರಿ ಸ್ಥಳಕ್ಕೆ ತೆರಳದಂತೆ ಸಾರ್ವಜನಿಕರಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ.  ಜಿಲ್ಲೆಯಾದ್ಯಂತ ಪ್ರವಾಸಿ ತಾಣಗಳಲ್ಲಿ ಟ್ರಕ್ಕಿಂಗ್​ ಕೂಡ ನಿಷೇಧಿಸಲಾಗಿದೆ. ಮಳೆ ಕಡಿಮೆಯಾಗುವವರೆಗೂ ಪ್ರವಾಸ ಮುಂದೂಡಲು  ಜಿಲ್ಲಾಧಿಕಾರಿ ಮೀನಾ ನಾಗರಾಜ್  ಪ್ರವಾಸಿಗರಲ್ಲಿ ಮನವಿ ಮಾಡಿದ್ದಾರೆ.

     

    Share Information
    Advertisement
    Click to comment

    You must be logged in to post a comment Login

    Leave a Reply