Connect with us

    DAKSHINA KANNADA

    ಮತ್ತೆ ಎರಡು ದಿನ ನೈಟ್‌ ಕರ್ಫ್ಯೂ ವಿಸ್ತರಿಸಿ ಜಿಲ್ಲಾಧಿಕಾರಿ ಆದೇಶ

    ಮಂಗಳೂರು, ಜುಲೈ 31: ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಂಗಳೂರು ನಗರ ಸೇರಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮತ್ತೆರಡು ದಿನ ನೈಟ್‌ ಕರ್ಫ್ಯೂ ವಿಸ್ತರಿಸಿ ದ.ಕ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

    ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ನೈಟ್‌ ಕರ್ಫ್ಯೂ ಮುಂದುವರೆಯಲಿದೆ. ಮೂರು ದಿನಗಳ ಹಿಂದೆ ಹೊರಡಿಸಿದ್ದ ನೈಟ್‌ ಕರ್ಫ್ಯೂ ಆದೇಶ ಇಂದಿಗೆ ಕೊನೆಯಾದ ಹಿನ್ನೆಲೆಯಲ್ಲಿ ಇಂದು ಮತ್ತೆ ಎರಡು ದಿನಗಳಿಗೆ ವಿಸ್ತರಿಸಿ ಆದೇಶ ಮಾಡಲಾಗಿದೆ.

    ಸಂಜೆ 6 ಗಂಟೆಯೊಳಗೆ ಅಂಗಡಿ ಮುಂಗಟ್ಟು ಮುಚ್ಚುವಂತೆ ಆದೇಶ ಹೊರಡಿಸಲಾಗಿದ್ದು,  ತುರ್ತು ಸೇವೆಗೆ ಮಾತ್ರ ಅವಕಾಶ ಈ ಆದೇಶ ಆ.3ರ ಮುಂಜಾನೆಯವರೆಗೆ ನಿರ್ಬಂಧ ಮುಂದುವರೆಯಲಿದೆ.

    Share Information
    Advertisement
    Click to comment

    You must be logged in to post a comment Login

    Leave a Reply