Connect with us

KARNATAKA

ಕಿವಿ ಚುಚ್ಚಲು ಅರಿವಳಿಕೆ ನೀಡಿದ ವೈದ್ಯ, 5 ತಿಂಗಳ ಮಗು ಸಾವು.!

ಚಾಮರಾಜನಗರ: ಕಿವಿ ಚುಚ್ಚುವಾಗ 5 ತಿಂಗಳ ಮಗು ಸಾವನ್ನಪ್ಪಿದ ಘಟನೆ ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ನಡೆದಿದೆ.

ಸಾಂದರ್ಭಿಕ ಚಿತ್ರ

ಬೊಮ್ಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಿವಿ ಚುಚ್ಚಲು ಮಗುವಿಗೆ ವೈದ್ಯರು ಅರಿವಳಿಕೆ ನೀಡಿದ್ದರು. ವೈದ್ಯರ ನಿರ್ಲಕ್ಷ್ಯದಿಂದ ಮಗು ಮೃತಪಟ್ಟಿದೆ ಎಂದು ಆರೋಪಿಸಲಾಗಿದೆ. ಹಂಗಳ ಗ್ರಾಮದ ಆನಂದ್, ಮಾನಸ ದಂಪತಿ ಪುತ್ರ ಪ್ರಖ್ಯಾತ್ ಎಂಬ 6 ತಿಂಗಳ ಮಗು ಮೃತಪಟ್ಟಿದ್ದು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಪೋಷಕರು ಕಿವಿ ಚುಚ್ಚಲು ತಮ್ಮ ಮಗುವನ್ನು ಬೊಮ್ಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದಾರೆ. ಆಗ ವೈದ್ಯರು ನೋವಾಗಬಾರದೆಂದು ಮಗುವಿನ 2 ಕಿವಿಗಳಿಗೆ ಅರವಳಿಕೆ ನೀಡಿದ್ದಾರೆ, ನಂತರ ಮಗುವಿನ ಬಾಯಲ್ಲಿ ನೊರೆ ಬಂದಿದ್ದು, ವೈದ್ಯರ ಸಲಹೆ ಮೇರೆಗೆ ಗುಂಡ್ಲುಪೇಟೆ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು, ಅಲ್ಲಿ ಮಗು ಮೃತಪಟ್ಟಿದೆ ಎಂದು ವೈದ್ಯರು ಧೃಡಪಡಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *